ಒಟ್ಟಾವ: ಏರ್ ಇಂಡಿಯಾ ವಿಮಾನದಲ್ಲಿ ನವೆಂಬರ್ 19ರಂದು ಪ್ರಯಾಣಿಸುವವರಿಗೆ ಖಲಿಸ್ತಾನಿ ಬೆಂಬಲಿತ ಉಗ್ರ ಸಂಘಟನೆ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸೇವೆಗೆ ಎದುರಾಗುವ ಯಾವುದೇ ಬೆದರಿಕೆ, ಆನ್ಲೈನ್ ಎಚ್ಚರಿಕೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಕೆನಡಾ ಸರ್ಕಾರ ಹೇಳಿದೆ.
ಅಹಮದಾಬಾದ್ನಲ್ಲಿ ನ.19ರಂದು ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಆ ದಿನ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವವರಿಗೆ ಎಚ್ಚರಿಕೆ ನೀಡಿರುವ ನಿಷೇಧಿತ ಸಿಖ್ ಫಾರ್ ಜಸ್ಟಿಸ್ ಸಂಘಟನೆ ಸಂಸ್ಥಾಪಕ ಗುರುಪತ್ವಂತ್ ಸಿಂಗ್ ಪನ್ನು ವಿಡಿಯೋ ಬಿಡುಗಡೆ ಮಾಡಿದ್ದ. ಸಂಭಾವ್ಯ ಬೆದರಿಕೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಕೆನಡಾ ಸರ್ಕಾರ ಹೇಳಿದೆ.