ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ದೇಶದಿಂದ ಭಾರತೀಯ ಸೇನೆ ಹಿಂದೆಗೆದುಕೊಳ್ಳುವಂತೆ, ಅಲ್ಲಿನ ಸರ್ಕಾರವು ಅಧಿಕೃತವಾಗಿ ಭಾರತಕ್ಕೆ ಸೂಚಿಸಿದೆ.
ಹೊಸದಾಗಿ ಆಯ್ಕೆಯಾದ ಮಾಲೀನ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಕಚೇರಿಯಿಂದ ಶನಿವಾರ ಈ ಘೋಷಣೆ ಮಾಡಲಾಗಿದೆ. ರಾಷ್ಟ್ರಪತಿಗಳ ಕಚೇರಿಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾದಾಗ ಅಧ್ಯಕ್ಷ ಮುಯಿಝು ಅವರು ಔಪಚಾರಿಕವಾಗಿ ಈ ಬಗ್ಗೆ ವಿನಂತಿಸಿದರು ಎಂದು ಪ್ರಕಟಣೆ ತಿಳಿಸಿದೆ.
ಭೂ ವಿಜ್ಞಾನ ಸಚಿವರಾಗಿರುವ ರಿಜಿಜು ಅವರು ಮಾಲ್ಮೀಮ್ಸ್ ಅಧ್ಯಕ್ಷರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು ಎಂದು ವರದಿಯಾಗಿದೆ.
ಮಾಲ್ಡೀವ್ಸ್ನಲ್ಲಿ ಭಾರತವು ಸುಮಾರು 70 ಸೈನಿಕರನ್ನು ಹೊಂದಿದೆ, ರಾಡಾರ್ಗಳು ಮತ್ತು ಕಣ್ಗಾವಲು ವಿಮಾನಗಳನ್ನು ನಿರ್ವಹಿಸುತ್ತಿದೆ. ಭಾರತದ ಯುದ್ಧನೌಕೆಗಳು ದೇಶದ ವಿಶೇಷ ಆರ್ಥಿಕ ವಲಯದಲ್ಲಿ ಗಸ್ತು ತಿರುಗಲು ಸಹ ಸಹಾಯ ಮಾಡುತ್ತವೆ. ರಿಜಿಜು ಅವರು ಮುಯಿಜ್ಜು ಅವರನ್ನು ಭೇಟಿ ಮಾಡಿದ ವೇಳೆ ಮಾದಕವಸ್ತು ಕಳ್ಳಸಾಗಣೆ ವಿರೋಧಿ ಉದ್ದೇಶಗಳಿಗಾಗಿ ವಿಮಾನವನ್ನು ನಿರ್ವಹಿಸಲು ಮಾಲ್ಡೀವ್ಸ್ನಲ್ಲಿರುವ ಭಾರತೀಯ ಮಿಲಿಟರಿ ಸಿಬ್ಬಂದಿಯ ವಿಷಯವನ್ನು ಅಧ್ಯಕ್ಷರು ಪ್ರಸ್ತಾಪಿಸಿದರು ಎಂದು ಭಾರತೀಯ ಸರ್ಕಾರದ ಮೂಲಗಳು ತಿಳಿಸಿವೆ.