Categories: ವಿದೇಶ

ವಿಚ್ಛೇದನದ ವೇಳೆ ಕಿಡ್ನಿ ವಾಪಸ್ ಕೇಳಿದ ಪತಿರಾಯ

ಅಮೆರಿಕಾ: ಇದೇನಪ್ಪ ವಿಚಿತ್ರ ಅಂತಿರಾ! ಇಲ್ಲಿದೆ ಮಾಹಿತಿ,2001 ರಲ್ಲಿ ತನ್ನ ಪತ್ನಿಯ ಜೀವ ಉಳಿಸುವ ಉದ್ದೇಶದಿಂದ ತನ್ನ ಒಂದು ಕಿಡ್ನಿಯನ್ನ ದಾನ ಮಾಡಿದ್ದ. ಆದರೆ ಕೆಲವೇ ವರ್ಷಗಳಲ್ಲಿ ಪತ್ನಿ ವಿಚ್ಛೇದನಕ್ಕೆ ಕೋರ್ಟ್‌ನಲ್ಲಿ ಅರ್ಜಿಸಲ್ಲಿಸಿದ್ದಳು.ಇದನ್ನು ತಿಳಿದು ಕೋಪಗೊಂಡ ಪತಿ ತನ್ನ ಕಿಡ್ನಿ ವಾಪಸ್‌ ಕೇಳಿದ್ದಾನೆ. ಈ ಘಟನೆ ಅಮೆರಿಕಾದಲ್ಲಿ ನಡೆದಿದ್ದು ವಿಚ್ಛೇದನ ವೇಳೆ ಪತಿ ತನ್ನ ಕಿಡ್ನಿ ಹಿಂತಿರಿಗಿಸುವಂತೆ ಕೋರ್ಟ್‌ಗೆ ಬೇಡಿಕೆ ಇಟ್ಟಿದ್ದಾನೆ.

ಇದಲ್ಲದೆ ಕಿಡ್ನಿ ವಾಪಸ್‌ ಕೊಡಲು ಆಗದಿದ್ದಲ್ಲಿ 1.2 ಮಿಲಿಯನ್ ಪೌಂಡ್‌ ಕೊಡಬೇಕಾಗಿ ಬೇಡಿಕೆ ಇಟ್ಟಿದ್ದಾನೆ. ಡೈಲಿ ಸ್ಟಾರ್‌ ವರದಿ ತಿಳಿಸಿರುವಂತೆ 1990 ರಲ್ಲಿ ಮದುವೆಯಾಗಿದ್ದ ದಂಪತಿ ರಿಚರ್ಡ್ ಬಟಿಸ್ಟಾ(ಪತಿ) ಮತ್ತು ಡೊನ್ನೆಲ್ (ಪತ್ನಿ) ಇವರಿಗೆ 3 ಮಕ್ಕಳಿದ್ದಾರೆ. ಆದರೆ 2001 ರಲ್ಲಿ ಅನಾರೋಗ್ಯದಿಂದ ಬಳಲುತಿದ್ದ ಡೊನ್ನೆಲ್ಲ್‌ಗೆ ಎರಡೂ ಕಿಡ್ನಿ ವಿಫಲವಾದ ಕಾರಣ ಪತಿ ಬಟಿಸ್ಟಾ ತನ್ನ ಒಂದು ಕಿಡ್ನಿ ಆಕಗೆ ನೀಡಿದ್ದ.

ಇದಾದ ಕೆಲವೇ ವರ್ಷಗಳಲ್ಲಿ ಇಬ್ಬರ ನಡುವೆ ಭಿನ್ನಾಬಿಪ್ರಾಯ ಬಂದಿರುವ ಕಾರಣ ಡೊನ್ನೆಲ್‌ ವಿಚ್ಛೇದಕ್ಕೆ ಅರ್ಜಿಸಲ್ಲಿಸಿದ್ದಳು ಇದರಿಂದ ನೊಂದ ಪತಿ ಕಿಡ್ನಿ ಅಥವಾ ಹಣವನ್ನು ವಾಪಸ್‌ ನೀಡಬೆಕಾಗಿ ಹೇಳಿದ್ದಾನೆ. ಆದರೆ ಕಿಡ್ನಿ ವಾಪಸ್‌ ನೀಡಲು ಸಾಧ್ಯವಿಲ್ಲ ಎಂದು ತಜ್ಞ ವೈದ್ದಯರು ಸ್ಪಷ್ಟಪಡಿಸಿದ್ದಾರೆ. ಪುನ: ಶಸ್ತ್ರಚಕಿತ್ಸೆಗೆ ಒಳಪಡಿಸಿ ಕಿಡ್ನಿ ಹಿಂತಿರುಗಿಸುವುದರಿಂದ ಆಕೆಯ ಪ್ರಾಣಕ್ಕೆ ಅಪಾಯ ಇರುವ ಕಾರಣ ಕಿಡ್ನಿ ಮರಳಿ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್‌ ತೀರ್ಪು ನೀಡಿದೆ.

 

Ashitha S

Recent Posts

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

6 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

11 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

30 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

31 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

52 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

1 hour ago