ನವದೆಹಲಿ: ಕೆನಡಾ ಮೂಲದ ಖಲಿಸ್ತಾನ್ ಪರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಕೈವಾಡದ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಇದು ಭಾರತದ ಸರ್ಕಾರದ ನೀತಿಯಲ್ಲ ಎಂದು ಹೇಳಿದ್ದಾರೆ.
ನ್ಯೂಯಾರ್ಕ್ನ ಕೌನ್ಸಿಲ್ ಆನ್ ಫಾರಿನ್ ರಿಲೇಶನ್ಸ್ನಲ್ಲಿ ನಡೆದ ಸಂವಾದದಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ. ಇದು ಭಾರತ ಸರ್ಕಾರದ ನೀತಿ ಅಲ್ಲ ಎಂದು ನಾವು ಕೆನಡಿಯನ್ನರಿಗೆ ಹೇಳಿದ್ದೇವೆ. ಅವರಿಗೆ ಆರೋಪದ ಕುರಿತು ಏನಾದರೂ ಸ್ಪಷ್ಟ, ಪರಿಪೂರ್ಣ ಮಾಹಿತಿ ಇದ್ದಲ್ಲಿ ತಿಳಿಸುವಂತೆ ನಾವು ಅವರಿಗೆ ಕೇಳಿಕೊಂಡಿದ್ದೇವೆ ಎಂದು ಜೈಶಂಕರ್ ತಿಳಿಸಿದರು.
ಭಾರತದಲ್ಲಿ ಈ ಹಿಂದೆ ಯುಎಸ್ ರಾಯಭಾರಿಯಾಗಿದ್ದ ಕೆನ್ನೆತ್ ಜಸ್ಟರ್ ಅವರ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಕಳೆದ ಕೆಲವು ವರ್ಷಗಳಲ್ಲಿ ಕೆನಡಾ ಪ್ರತ್ಯೇಕತಾವಾದ, ಸಂಘಟಿತ ಅಪರಾಧ, ಹಿಂಸೆ ಮತ್ತು ಉಗ್ರವಾದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಘಟನೆಗಳು ನಡೆದಿವೆ. ಈ ಉಗ್ರಗಾಮಿಗಳು ಕೆನಡಾದಲ್ಲಿ ಆಳವಾಗಿ ಬೇರೂರಿದ್ದಾರೆ. ಭಾರತವು ಕೆನಡಾಕ್ಕೆ ತಮ್ಮ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರಿಮಿನಲ್ ಗಳ ಮಾಹಿತಿ ಒದಗಿಸುತ್ತಿದೆ. ಎಂದರು. ಅಲ್ಲದೆ ಅಪರಾಧಿಗಳನ್ನು ಹಸ್ತಾಂತರಿಸುವ ಕುರಿತು ಕೂಡ ವಿವರ ವಾದ ಮಾಹಿತಿ ಒದಗಿಸಿದ್ದೇವೆ ಎಂದರು.