ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಯನ್ನು 454 ಮತಗಳ ಅಂಗೀಕರಿಸಲಾಗಿತ್ತು. ಇದೀಗ ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಮಂಡಿಸಿದರು.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ 2023 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿತ್ತು. ಬಲವಾದ ಬೆಂಬಲವನ್ನು ಕೂಡ ಪಡೆಯಿತು. 60 ಸದಸ್ಯರನ್ನು ಒಳಗೊಂಡ ಎಂಟು ಗಂಟೆಗಳ ಚರ್ಚೆಯ ನಂತರ, ಮಸೂದೆಯನ್ನು ಅಂಗೀಕರಿಸಿತು, 454 ಸದಸ್ಯರು ಪರವಾಗಿ ಮತ ಚಲಾಯಿಸಿದರು, ಕೇವಲ ಇಬ್ಬರು ಅದರ ವಿರುದ್ಧವಾಗಿ ಮತ ಚಲಾಯಿಸಿದರು.
ಒಬಿಸಿ ಮತ್ತು ಮುಸ್ಲಿಂ ಮಹಿಳೆಯರಿಗೆ ನಾರಿ ಶಕ್ತಿ ವಂದನ್ ಅಧಿನಿಯಮ್ ಮಸೂದೆಯಲ್ಲಿ ಯಾವುದೇ ಪ್ರಾತಿನಿಧ್ಯ ನೀಡಿಲ್ಲದ ಕಾರಣ ವಿರುದ್ಧವಾಗಿ ವೋಟ್ ಮಾಡಿರುವುದಾಗಿ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಕೇವಲ ಮೇಲ್ಜಾತಿ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತಿದೆ.
ಉಳಿದ ಒಬಿಸಿ, ಮುಸ್ಲಿರಿಗೆ ಉಪಯೋಗವಿಲ್ಲ. ದೇಶದಲ್ಲಿ ಒಬಿಸಿ ಜನಸಂಖ್ಯೆ ಶೇಕಡಾ 50 ಕ್ಕಿಂತ ಹೆಚ್ಚಾಗಿದ್ದರೆ, ಲೋಕಸಭೆಯಲ್ಲಿ ಅವರ ಪ್ರಾತಿನಿಧ್ಯ ಕೇವಲ ಶೇ.22 ಪ್ರತಿಶತ ಇದೆ. ಮುಸ್ಲಿಂ ಜನಸಂಖ್ಯೆ ಶೇಕಡಾ 7 ರಷ್ಟು ಇದ್ದು ಇವರ ಪ್ರಾತಿನಿಧ್ಯ ಕೇವಲ 0.7 ಇದೆ. ಹಾಗಾದರೆ ನೀವು ಅವರಿಗೆ ಏಕೆ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.