Categories: ವಿದೇಶ

ನನ್ನ ದೇಹದ ಪ್ರತಿಯೊಂದು ಭಾಗ ಮತ್ತು ಬದುಕು ಜನರಿಗಾಗಿ ಮುಡಿಪು: ಪಿಎಂ ಮೋದಿ

ಫ್ರಾನ್ಸ್ : ಫ್ರಾನ್ಸ್‌ ಪ‍್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ‘ನನ್ನ ದೇಹದ ಪ್ರತಿಯೊಂದು ಭಾಗ ಮತ್ತು ನನ್ನ ಜೀವಿತದ ಪ್ರತಿಯೊಂದು ಕ್ಷಣವನ್ನು ನಿಮಗಾಗಿ, ನನ್ನ ದೇಶದ ಜನರಿಗಾಗಿ ಮುಡಿಪಾಗಿಡುವ ಪ್ರತಿಜ್ಞೆ ಮಾಡಿದ್ದೇನೆ’ ಎಂದು ಹೇಳಿದ್ದಾರೆ.

‘ಯುದ್ಧ ಭೂಮಿಯಾಗಿರಲಿ ಅಥವಾ ಪ್ರವಾಹ ಪೀಡಿತ ಪ್ರದೇಶವೇ ಆಗಿರಲಿ, ತನ್ನ ನಾಗರಿಕರನ್ನು ರಕ್ಷಿಸಿಕೊಳ್ಳಲು ಭಾರತ ಸದಾ ಮುಂದಿರುತ್ತದೆ. ಉಕ್ರೇನ್‌ನಿಂದ ಸುಡಾನ್‌ ವರೆಗೆ, ಯೆಮನ್‌ನಿಂದ ಅಫ್ಗಾನಿಸ್ತಾನ ವರೆಗೆ, ಇರಾಕ್‌ನಿಂದ ನೇಪಾಳದ ವರೆಗೆ ನಮ್ಮ ಜನರನ್ನು ಕಾಪಾಡಲು ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇವೆ’ ಎಂದಿದ್ದಾರೆ.

‘ಭಾರತ ಮತ್ತು ಫ್ರಾನ್ಸ್‌ ಬಾಂಧವ್ಯ ವೃದ್ಧಿಗೆ ನಿಮ್ಮ ಕೊಡುಗೆ ಕುರಿತು ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆಯಲಾಗುತ್ತದೆ’ ಎನ್ನುವ ಮೂಲಕ ಫ್ರಾನ್ಸ್‌ನಲ್ಲಿರುವ ಭಾರತೀಯ ಸಮುದಾಯದವನ್ನು ಹಾಡಿಹೊಗಳಿದ್ದಾರೆ. ನಾವು ಎಲ್ಲಿಗೆ ಹೋದರೂ ಅಲ್ಲಿ ಒಂದು ‘ಮಿನಿ ಭಾರತ’ವನ್ನು ರೂಪಿಸಿಕೊಳ್ಳುತ್ತೇವೆ ಎಂದೂ ಹೇಳಿದ್ದಾರೆ.

ಇನ್ನು  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ ನ ಅತ್ಯುನ್ನತ ಪ್ರಶಸ್ತಿ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಅನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಪ್ರದಾನ ಮಾಡಿದರು. ಅವರು ಈ ಗೌರವವನ್ನು ಪಡೆದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ.

 

https://twitter.com/i/broadcasts/1dRJZMMpVvMGB

Ashitha S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago