ಮಾಲೆ: ನರೇಂದ್ರ ಮೋದಿ ಮತ್ತು ಭಾರತೀಯರಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಕ್ಷಮೆ ಯಾಚಿಸಬೇಕೆಂದು ಮಾಲ್ಡೀವ್ಸ್ ಜುಮ್ಹೂರಿ ಪಕ್ಷದ (ಜೆಪಿ) ನಾಯಕ ಖಾಸಿಮ್ ಇಬ್ರಾಹಿಂ ಆಗ್ರಹಿಸಿದ್ದಾರೆ.
ಮಾಲ್ಡೀವ್ಸ್ ನ ಸದನದಲ್ಲಿ ನಡೆದ ಘರ್ಷಣೆಯ ನಂತರ ಆದ ಬೆಳವಣಿಗೆಯಲ್ಲಿ ಪ್ರತಿಪಕ್ಷ MDP ದೇಶದ ಅಧ್ಯಕ್ಷರ ವಿರುದ್ಧ ದೋಷಾರೋಪಣೆಯ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ.
ನೆರೆಹೊರೆಯ ದೇಶಗಳೊಂದಿಗಿನ ನಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವಂತಹ ಹೇಳಿಕೆಗಳನ್ನು ನೀಡಬಾರದು ಎಂದಿರುವ ಖಾಸಿಮ್, ಡಿಕ್ರಿಯನ್ನು ರದ್ದುಗೊಳಿಸುವ ವಿರುದ್ಧ ಮಾತನಾಡಿದ್ದು, ಅದರಿಂದ ರಾಷ್ಟ್ರಕ್ಕೆ ನಷ್ಟವಾಗಲಿದೆ ಎಂದಿದ್ದಾರೆ. ಜೊತೆಗೆ ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರ ಬಗ್ಗೆ ನೀಡಿದ ಹೇಳಿಕೆಗೆ ಔಪಚಾರಿಕವಾಗಿ ಕ್ಷಮೆಯಾಚಿಸುವಂತೆ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.