News Karnataka Kannada
Monday, April 29 2024
ವಿದೇಶ

ಕತಾರ್‌ ಗೆ ತೆರಳಲಿರುವ ಇಸ್ರೇಲ್‌ ಗುಪ್ತಚರ ಸಂಸ್ಥೆ ಮುಖ್ಯಸ್ಥ ಕಾರಣ ಏನು ಗೊತ್ತಾ

Uttarakhand tunnel collapse: Worker rescue operation in final stages
Photo Credit : News Kannada
ಟೆಲ್ ಅವಿವ್: ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್‌ನ ಮುಖ್ಯಸ್ಥ ಡೇವಿಡ್ ಬರ್ನಿಯಾ ಅವರು ಕತಾರ್‌ಗೆ ತೆರಳಿ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್ ಥಾನಿ ಅವರನ್ನು ಭೇಟಿಯಾಗಿ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.  ಇಸ್ರೇಲ್ ಮೂಲಗಳ ಪ್ರಕಾರ ಈ ಮಾತುಕತೆಯು ಕದನ ವಿರಾಮ ಮತ್ತು ಇಸ್ರೇಲಿ ಜೈಲಿನಿಂದ ಪ್ಯಾಲೇಸ್ಟಿನಿಯನ್ ಕೈದಿಗಳನ್ನು ಬಿಡುಗಡೆ ಮಾಡುವ ಕುರಿತು ನಡೆಯಲಿದೆ.  ಇಸ್ರೇಲ್ ತನ್ನ ಜೈಲುಗಳಿಂದ ಪ್ಯಾಲಿಸ್ತೇನಿ ಮಹಿಳೆಯರು ಮತ್ತು ಮಕ್ಕಳನ್ನು ಮಾತ್ರ ಬಿಡುಗಡೆ ಮಾಡುವುದಾಗಿ ಹೇಳಿದೆ.
ಆದರೆ ಆರೋಪಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದ್ದು ಈ ನಿಟ್ಟಿನಲ್ಲಿ ಮಾತುಕತೆ ಮಹತ್ವ ಪಡೆದಿದೆ. ಹಮಾಸ್ ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್‌ನಿಂದ ಅಪಹರಿಸಲ್ಪಟ್ಟ 50 ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಇಸ್ರೇಲಿ ಜೈಲಿನಲ್ಲಿರುವ 300 ಪ್ಯಾಲೆಸ್ಟೀನಿಯನ್ನರನ್ನು ಬಿಡುಗಡೆ ಮಾಡಬೇಕು ಎಂದು ಮಾತುಕತೆ ನಡೆದಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು