ನವದೆಹಲಿ: ಪ್ರಶ್ನೆಗಾಗಿ ನಗದು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಸಭೆಯ ನೈತಿಕ ಸಮಿತಿಯ ವರದಿಯ ಆಧಾರದ ಮೇಲೆ ತನ್ನನ್ನು ಈಗ ಉಚ್ಚಾಟಿಸಿದರೂ ದೊಡ್ಡ ಜನಾದೇಶದೊಂದಿಗೆ ಮುಂದಿನ ಬಾರಿ ಲೋಕಸಭೆಗೆ ಮರಳುವೆ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ. ನೈತಿಕ ಸಮಿತಿಯು 6:4 ಮತಗಳಲ್ಲಿ ಅಂಗೀಕರಿಸಿದ 500 ಪುಟಗಳ ವರದಿಗೆ ಪ್ರತಿಕ್ರಿಯಿಸಿದ ಮಹುವಾ ಮೊಯಿತ್ರಾ ಇದು ಕಾಂಗರೂ ಕೋರ್ಟ್ನಲ್ಲಿ ಪೂರ್ವ ನಿಗದಿತ ಪಂದ್ಯ. “ಭಾರತಕ್ಕೆ ಇದು ಸಂಸದೀಯ ಪ್ರಜಾಪ್ರಭುತ್ವದ ಸಾವು” ಎಂದು ಹೇಳಿರುವುದಾಗಿ ವರದಿಯಾಗಿದೆ.
ಮಹುವಾ ಮೊಯಿತ್ರಾ ವಿರುದ್ಧದ ಆರೋಪಗಳನ್ನು ನೈತಿಕ ಸಮಿತಿಯು ತುಂಬಾ ಗಂಭೀರವಾಗಿ ಪರಿಗಣಿಸಿದೆ. ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಎತ್ತಿದ್ದ ಗೌತಮ್ ಅದಾನಿ ವಿರುದ್ಧ ಪ್ರಶ್ನೆಗಳನ್ನು ಪೋಸ್ಟ್ ಮಾಡಿದ್ದನ್ನು ಉದ್ಯಮಿ ದರ್ಶನ್ ಹಿರಾನಂದಾನಿ ಒಪ್ಪಿಕೊಂಡಿದ್ದಾರೆ. ಆದಾಗ್ಯೂ ಹಿರಾನಂದಾನಿ ಅವರೊಂದಿಗೆ ಸಂಸತ್ತಿನ ಲಾಗಿನ್ ಅನ್ನು ಹಂಚಿಕೊಂಡಿರುವ ಬಗ್ಗೆ ಮಹುವಾ ಕೂಡಾ ಒಪ್ಪಿಕೊಂಡಿದ್ದಾರೆ. ಈ ರೀತಿ ಮಾಡಿದ್ದಕ್ಕಾಗಿ ಮಹುವಾ ಅವರನ್ನು ಲೋಕಸಭೆಯಿಂದ ಹೊರಹಾಕುವಂತೆ ನೈತಿಕ ಸಮಿತಿ ಶಿಫಾರಸು ಮಾಡಿದೆ.