ನವದೆಹಲಿ: ಪ್ರಶ್ನೆಗಾಗಿ ನಗದು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಸಭೆಯ ನೈತಿಕ ಸಮಿತಿಯ ವರದಿಯ ಆಧಾರದ ಮೇಲೆ ತನ್ನನ್ನು ಈಗ ಉಚ್ಚಾಟಿಸಿದರೂ ದೊಡ್ಡ ಜನಾದೇಶದೊಂದಿಗೆ ಮುಂದಿನ ಬಾರಿ ಲೋಕಸಭೆಗೆ ಮರಳುವೆ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ. ನೈತಿಕ ಸಮಿತಿಯು 6:4 ಮತಗಳಲ್ಲಿ ಅಂಗೀಕರಿಸಿದ 500 ಪುಟಗಳ ವರದಿಗೆ ಪ್ರತಿಕ್ರಿಯಿಸಿದ ಮಹುವಾ ಮೊಯಿತ್ರಾ ಇದು ಕಾಂಗರೂ ಕೋರ್ಟ್ನಲ್ಲಿ ಪೂರ್ವ ನಿಗದಿತ ಪಂದ್ಯ. “ಭಾರತಕ್ಕೆ ಇದು ಸಂಸದೀಯ ಪ್ರಜಾಪ್ರಭುತ್ವದ ಸಾವು” ಎಂದು ಹೇಳಿರುವುದಾಗಿ ವರದಿಯಾಗಿದೆ.
ಮಹುವಾ ಮೊಯಿತ್ರಾ ವಿರುದ್ಧದ ಆರೋಪಗಳನ್ನು ನೈತಿಕ ಸಮಿತಿಯು ತುಂಬಾ ಗಂಭೀರವಾಗಿ ಪರಿಗಣಿಸಿದೆ. ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಎತ್ತಿದ್ದ ಗೌತಮ್ ಅದಾನಿ ವಿರುದ್ಧ ಪ್ರಶ್ನೆಗಳನ್ನು ಪೋಸ್ಟ್ ಮಾಡಿದ್ದನ್ನು ಉದ್ಯಮಿ ದರ್ಶನ್ ಹಿರಾನಂದಾನಿ ಒಪ್ಪಿಕೊಂಡಿದ್ದಾರೆ. ಆದಾಗ್ಯೂ ಹಿರಾನಂದಾನಿ ಅವರೊಂದಿಗೆ ಸಂಸತ್ತಿನ ಲಾಗಿನ್ ಅನ್ನು ಹಂಚಿಕೊಂಡಿರುವ ಬಗ್ಗೆ ಮಹುವಾ ಕೂಡಾ ಒಪ್ಪಿಕೊಂಡಿದ್ದಾರೆ. ಈ ರೀತಿ ಮಾಡಿದ್ದಕ್ಕಾಗಿ ಮಹುವಾ ಅವರನ್ನು ಲೋಕಸಭೆಯಿಂದ ಹೊರಹಾಕುವಂತೆ ನೈತಿಕ ಸಮಿತಿ ಶಿಫಾರಸು ಮಾಡಿದೆ.
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…