News Karnataka Kannada
Friday, May 03 2024
ವಿದೇಶ

ಹೊಸದಿಲ್ಲಿ: ಸುಡಾನ್ ದಂಗೆ, ಭಾರತೀಯರ ಸ್ಥಿತಿಗತಿ ಪರಾಮರ್ಶೆಗೆ ಪ್ರಧಾನಿ ಅಧ್ಯಕ್ಷತೆಯಲ್ಲಿ ಸಭೆ

PM Modi to address US Congress for 2nd time
Photo Credit : IANS

ಹೊಸದಿಲ್ಲಿ: ಹಿಂಸಾಚಾರ ಪೀಡಿತ ಸುಡಾನ್ ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಡಾನ್ ನಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತದ ವಿದೇಶಾಂಗ ಸಚಿವಾಲಯವು ಅಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿವಿಧ ಹಂತಗಳಲ್ಲಿ ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಿದೆ.

ಮೂಲಗಳ ಪ್ರಕಾರ, ಈ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿಯವರು ಸುಡಾನ್ ನಲ್ಲಿ ಪರಿಸ್ಥಿತಿ ಮತ್ತು ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ  ಕ್ರಮಗಳನ್ನು ಪರಿಶೀಲಿಸಲಿದ್ದಾರೆ.

ಭಾರತವು ತನ್ನ ನಾಗರಿಕರನ್ನು ಸುಡಾನ್ ನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲು ಸಿದ್ಧವಾಗಿದೆ, ಆದರೆ ಸ್ಥಳೀಯ ಪರಿಸ್ಥಿತಿ ಅನುಗುಣವಾಗಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಕರ್ನಾಟಕ ಮೂಲದ 31 ಭಾರತೀಯರು ಸುಡಾನ್ ನಲ್ಲಿ ಸಿಲುಕಿಕೊಂಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು