ಟೊರೊಂಟೊ: ಖಲಿಸ್ತಾನ್ ಪರ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಜಸ್ಟಿನ್ ಟ್ರುಡೊ ಭಾರತವನ್ನು ದೂಷಿಸಿದ ಕೆಲವೇ ಕ್ಷಣಗಳಲ್ಲಿ ಒಟ್ಟಾವಾ ಭಾರತೀಯ ರಾಜತಾಂತ್ರಿಕರನ್ನು ತೊರೆಯುವಂತೆ ಆದೇಶಿಸಿದೆ. ಬಳಿಕ ಕೆನಡಾದ ರಾಜತಾಂತ್ರಿಕರನ್ನು ನವದೆಹಲಿಯಲ್ಲಿರುವ ತನ್ನ ಹೈಕಮಿಷನ್ನಿಂದ ಹೊರಹಾಕುವ ಮೂಲಕ ಭಾರತ ತಿರುಗೇಟು ನೀಡಿದೆ. ಇದೀಗ ಕೆನಡಾ ಪ್ರಧಾನಿ ಒಟ್ಟಾರೆ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಭಾರತವನ್ನು ಪ್ರಚೋದಿಸುವ ಗುರಿ ಹೊಂದಿಲ್ಲ ಎಂದು ಹೇಳಿದ್ದಾರೆ.
“ಭಾರತ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾಗಿದೆ. ನಾವು ಯಾರನ್ನೂ ಪ್ರಚೋದಿಸಲು ನೋಡುತ್ತಿಲ್ಲಎಂದು ಹೌಸ್ ಆಫ್ ಕಾಮನ್ಸ್ ಪ್ರಾರಂಭವಾಗುವ ಮೊದಲು ಟ್ರೂಡೊ ಹೇಳಿದರು. ಏತನ್ಮಧ್ಯೆ, ಮುನ್ನೆಚ್ಚರಿಕೆ ಕ್ರಮವಾಗಿ ನವದೆಹಲಿಯಲ್ಲಿರುವ ಕೆನಡಾದ ಹೈಕಮಿಷನ್ ಸುತ್ತಲೂ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜತಾಂತ್ರಿಕ ಸಂಘರ್ಷವು ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಗೆ ಸಾಕ್ಷಿಯಾಗಿದೆ.