ಟೊರೊಂಟೊ: ಖಲಿಸ್ತಾನ್ ಪರ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಜಸ್ಟಿನ್ ಟ್ರುಡೊ ಭಾರತವನ್ನು ದೂಷಿಸಿದ ಕೆಲವೇ ಕ್ಷಣಗಳಲ್ಲಿ ಒಟ್ಟಾವಾ ಭಾರತೀಯ ರಾಜತಾಂತ್ರಿಕರನ್ನು ತೊರೆಯುವಂತೆ ಆದೇಶಿಸಿದೆ. ಬಳಿಕ ಕೆನಡಾದ ರಾಜತಾಂತ್ರಿಕರನ್ನು ನವದೆಹಲಿಯಲ್ಲಿರುವ ತನ್ನ ಹೈಕಮಿಷನ್ನಿಂದ ಹೊರಹಾಕುವ ಮೂಲಕ ಭಾರತ ತಿರುಗೇಟು ನೀಡಿದೆ. ಇದೀಗ ಕೆನಡಾ ಪ್ರಧಾನಿ ಒಟ್ಟಾರೆ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಭಾರತವನ್ನು ಪ್ರಚೋದಿಸುವ ಗುರಿ ಹೊಂದಿಲ್ಲ ಎಂದು ಹೇಳಿದ್ದಾರೆ.
“ಭಾರತ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾಗಿದೆ. ನಾವು ಯಾರನ್ನೂ ಪ್ರಚೋದಿಸಲು ನೋಡುತ್ತಿಲ್ಲಎಂದು ಹೌಸ್ ಆಫ್ ಕಾಮನ್ಸ್ ಪ್ರಾರಂಭವಾಗುವ ಮೊದಲು ಟ್ರೂಡೊ ಹೇಳಿದರು. ಏತನ್ಮಧ್ಯೆ, ಮುನ್ನೆಚ್ಚರಿಕೆ ಕ್ರಮವಾಗಿ ನವದೆಹಲಿಯಲ್ಲಿರುವ ಕೆನಡಾದ ಹೈಕಮಿಷನ್ ಸುತ್ತಲೂ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜತಾಂತ್ರಿಕ ಸಂಘರ್ಷವು ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಗೆ ಸಾಕ್ಷಿಯಾಗಿದೆ.
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…