ಶ್ರೀನಗರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂಬ ಆದೇಶ ಹೊರಡಿಸಿದ್ದು, ಈ ಆದೇಶ ಹಿಂಪಡೆಯುವಂತೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮಂಗಳವಾರ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. ಬಾರಾಮುಲ್ಲಾದಲ್ಲಿ ಪಕ್ಷದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಆದೇಶದ ವಿಚಾರದಲ್ಲಿ ಸರ್ಕಾರ ಇದರಲ್ಲಿ ಏಕೆ ಮಧ್ಯಪ್ರವೇಶಿಸಬೇಕು? ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಇಂತಹ ಆದೇಶ ಮಾಡಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಇಂತಹ ಆದೇಶಗಳೆಲ್ಲಾ ಜಾರಿಯಾದಾಗ ಬಿಜೆಪಿ ಸರ್ಕಾರ ಇತ್ತು. ಹೀಗಾಗಿ ನಮ್ಮಗೆ ಆಶ್ಚರ್ಯ ಏನಿಸಿರಲಿಲ್ಲ. ಆದರೆ, ಈಗ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಂಡಿರುವುದು ಬೇಸರದ ಸಂಗತಿ, ಇದು ಅತ್ಯಂತ ದುರದೃಷ್ಟಕರ ಎಂದರು.
“ಕರ್ನಾಟಕದಲ್ಲಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವಂತೆ, ಆ ಆದೇಶವನ್ನು ಹಿಂತೆಗೆದುಕೊಳ್ಳುವ ಕೆಲಸ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ವಿನಂತಿಸುತ್ತೇನೆ ಎಂದರು.