Categories: ವಿದೇಶ

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಹಿಂಪಡೆಯಿರಿ ಎಂದು ಕಾಂಗ್ರೆಸ್ ಗೆ ಒತ್ತಾಯಿಸಿದ ಒಮರ್‌ ಅಬ್ದುಲ್ಲಾ

ಶ್ರೀನಗರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂಬ ಆದೇಶ ಹೊರಡಿಸಿದ್ದು, ಈ ಆದೇಶ ಹಿಂಪಡೆಯುವಂತೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮಂಗಳವಾರ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. ಬಾರಾಮುಲ್ಲಾದಲ್ಲಿ ಪಕ್ಷದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಆದೇಶದ ವಿಚಾರದಲ್ಲಿ ಸರ್ಕಾರ ಇದರಲ್ಲಿ ಏಕೆ ಮಧ್ಯಪ್ರವೇಶಿಸಬೇಕು? ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಇಂತಹ ಆದೇಶ ಮಾಡಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಇಂತಹ ಆದೇಶಗಳೆಲ್ಲಾ ಜಾರಿಯಾದಾಗ ಬಿಜೆಪಿ ಸರ್ಕಾರ ಇತ್ತು. ಹೀಗಾಗಿ ನಮ್ಮಗೆ ಆಶ್ಚರ್ಯ ಏನಿಸಿರಲಿಲ್ಲ. ಆದರೆ, ಈಗ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಂಡಿರುವುದು ಬೇಸರದ ಸಂಗತಿ, ಇದು ಅತ್ಯಂತ ದುರದೃಷ್ಟಕರ ಎಂದರು.

“ಕರ್ನಾಟಕದಲ್ಲಿ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವಂತೆ, ಆ ಆದೇಶವನ್ನು ಹಿಂತೆಗೆದುಕೊಳ್ಳುವ ಕೆಲಸ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ವಿನಂತಿಸುತ್ತೇನೆ ಎಂದರು.

Umesha HS

Recent Posts

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

6 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

17 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

31 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

52 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago