ಜರುಸಲೇಂ: ಹಮಾಸ್ ಉಗ್ರರು ಇಸ್ರೇಲ್ ಮೇಲೆ ಭೀಕರ ದಾಳಿ ನಡೆಸಿ ಒಂದು ವಾರ ಕಳೆದಿದೆ. ಇದೀಗ ಇಸ್ರೇಲ್ ನೆಲೆಸಿರುವ ಭಾರತೀಯರನ್ನು ಸ್ವದೇಶಕ್ಕೆ ವಾಪಸ್ ಕರೆತರುವ ಆಪರೇಷನ್ ಅಜಯ್ ಕಾರ್ಯಾಚರಣೆ ನಡೆಯುತ್ತಿದೆ. ಯುದ್ಧ ಪೀಡಿತ ಇಸ್ರೇಲ್ನಿಂದ ಭಾರತೀಯರನ್ನು ಹೊತ್ತ ಮೂರನೇ ವಿಮಾನ ನವದೆಹಲಿಗೆ ಹೊರಟಿದೆ ಎಂದು ಭಾರತೀಯ ರಾಯಭಾರ ಕಚೇರಿ ಶನಿವಾರ ತಿಳಿಸಿದೆ.
197 ಜನರನ್ನು ಹೊತ್ತ ವಿಮಾನ ಹೊರಟಿದೆ ಎಂದು ಇಸ್ರೇಲ್ನಲ್ಲಿರುವ ರಾಯಭಾರ ಕಚೇರಿ ಮಾಹಿತಿ ನೀಡಿದೆ. `ಆಪರೇಷನ್ ಅಜಯ್’ ಅಡಿಯಲ್ಲಿ ಇಸ್ರೇಲ್ನಿಂದ ಭಾರತೀಯರನ್ನು ಕರೆತರುವ ಕಾರ್ಯ ನಡೆಯುತ್ತಿದೆ. ಶನಿವಾರ ಬೆಳಗ್ಗೆ ಇಸ್ರೇಲ್ನ ಟೆಲ್ ಅವೀವ್ನಿಂದ 235 ಭಾರತೀಯ ಪ್ರಜೆಗಳನ್ನು ಹೊತ್ತ ಎರಡನೇ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಇದಕ್ಕೂ ಮೊದಲು ಬಂದಿದ್ದ ವಮಾನದಲ್ಲಿ 230 ಜನ ಬಂದಿದ್ದರು.