ನವದೆಹಲಿ: ಭಾರತ ಸರ್ಕಾರ ಟ್ವಿಟರ್ ಮುಚ್ಚುವುದಾಗಿ ಬೆದರಿಕೆ ಹಾಕಿತ್ತು ಎಂಬ ಟ್ವಿಟರ್ ಮಾಜಿ ಸಿಇಒ ಜಾಕ್ ಡೋರ್ಸೆ ಹೇಳಿಕೆ ವಿರುದ್ಧ ಕೇಂದ್ರ ಸರ್ಕಾರ ಮಂಗಳವಾರ ವಾಗ್ದಾಳಿ ನಡೆಸಿದೆ.
ಇದು ಸಂಶಯಾಸ್ಪದ ನಡೆಯ ಪ್ರತೀಕ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಟ್ವಿಟರ್ ಸಂಸ್ಥೆಯ ಯಾರು ಕೂಡ ಜೈಲಿಗೆ ಹೋಗಿಲ್ಲ ಅಥವಾ ದೇಶದಲ್ಲಿ ಟ್ವಿಟರ್ ಸಂಸ್ಥೆಯನ್ನು ಮುಚ್ಚಿಲ್ಲ ಎಂದು ಹೇಳಿದ್ದಾರೆ.
2021 ರ ಆರಂಭದಲ್ಲಿ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಟ್ವಿಟರ್ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸುವುದಾಗಿ ಬೆದರಿಕೆ ಹಾಕಿತ್ತು ಎಂಬ ಹೇಳಿಕೆಗೆ ರಾಜೀವ್ ಪ್ರತಿಕ್ರಿಯೆ ನೀಡಿದ್ದಾರೆ.
ಡಾರ್ಸೆ ಮತ್ತು ಅವರ ತಂಡವು ಅಧಿಕಾರದಲ್ಲಿದ್ದ ವೇಳೆ ಟ್ವಿಟರ್ ಭಾರತದ ಕಾನೂನನ್ನು ನಿರಂತರವಾಗಿ ಉಲ್ಲಂಘಿಸುತ್ತಿತ್ತು ಎಂದು ಹೇಳಿದ್ದಾರೆ.
ಯಾರೂ ಕೂಡ ಜೈಲಿಗೆ ಹೋಗಿಲ್ಲ: ಟ್ವಿಟರ್ ಮಾಜಿ ಸಿಇಒಗೆ ರಾಜೀವ್ ಟಾಂಗ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.