ಹೊಸದಿಲ್ಲಿ : ಯುಎಇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ್ದು, ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ಅವಿಭಾಜ್ಯ ಅಂಗವೆಂದು ಯುನೈಟೆಡ್ ಅರಬ್ ಎಮಿರೆಟ್ಸ್ ಒಪ್ಪಿಕೊಂಡಿದೆ. ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆ ವೇಳೆ ಭಾರತ – ಮಧ್ಯ ಪ್ರಾಚ್ಯ – ಯುರೋಪ್ ಕಾರಿಡಾರ್ ಘೋಷಣೆಯಾಗಿದೆ.
ಈ ಬಗ್ಗೆ ವಿಡಿಯೋ ಒಂದನ್ನು ಹಂಚಿಕೊಂಡಿರುವ ಯುಎಇ ಪಿಒಕೆ ಸೇರಿದ ಭಾರತದ ನಕಾಶೆಯನ್ನು ಬಳಸುವ ಮೂಲಕ ಪಾಕಿಸ್ತಾನಕ್ಕೆ ಶಾಕ್ ನೀಡಿದೆ.
ಈ ವಿಡಿಯೋದಲ್ಲಿ ಉದ್ದೇಶಿತ ಭಾರತ – ಮಧ್ಯಪ್ರಾಚ್ಯ – ಯುರೋಪ್ ಆರ್ಥಿಕ ಕಾರಿಡಾರ್ನ ನೀಲಿನಕ್ಷೆಯನ್ನು ತೋರಿಸಲಾಗಿದ್ದು, ಈ ವೇಳೆ ಪೂರ್ಣ ಪ್ರಮಾಣದ ಭಾರತದ ನಕಾಶೆಯನ್ನು ಬಳಸಲಾಗಿದೆ. ಆ ನಕಾಶೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ತೋರಿಸಲಾಗಿದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಬಲಪಡಿಸುವ ರಾಜತಾಂತ್ರಿಕ ಕ್ರಮವನ್ನು ಸೂಚಿಸುತ್ತದೆ.
ಯುಎಇಯ ಉಪಪ್ರಧಾನಿ ಪಿಒಕೆ ಒಳಗೊಂಡ ಭಾರತದ ನಕಾಶೆಯ ವಿಡಿಯೋ ಹಂಚಿಕೊಂಡಿರುವುದು ಪಾಕಿಸ್ತಾನಕ್ಕೆ ಆಘಾತ ತಂದಿದೆ. ಯುಎಇ ನಡೆ ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿದೆ. ಭಾರತ – ಮಧ್ಯಪ್ರಾಚ್ಯ – ಯುರೋಪ್ ಆರ್ಥಿಕ ಕಾರಿಡಾರ್ ವಿವಿಧ ವಲಯಗಳಲ್ಲಿ ವ್ಯಾಪಾರ, ಹೂಡಿಕೆ ಮತ್ತು ಸಹಕಾರವನ್ನು ಹೆಚ್ಚಿಸುವ ಭರವಸೆಯನ್ನು ಹೊಂದಿದೆ.
ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…
ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…
ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…
ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.
ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.