Categories: ವಿದೇಶ

ಅಮೆರಿಕದ ರಾಬಿನ್​ಹುಡ್ ಕಂಪನಿ ಕಟ್ಟಿದ ಬೈಜು ಭಟ್ ರಾಜೀನಾಮೆ

ಕ್ಯಾಲಿಫೋರ್ನಿಯಾ: ಅಮೆರಿಕದ ಟ್ರೇಡಿಂಗ್ ಕಂಪನಿಯಾದ ರಾಬಿನ್​ಹುಡ್ ಮಾರ್ಕೆಟ್ಸ್​ನ ಸಹ-ಸಂಸ್ಥಾಪಕ ಬೈಜು ಭಟ್ ತಮ್ಮ ಚೀಫ್ ಕ್ರಿಯೇಟಿವ್ ಆಫೀಸರ್ ಸ್ಥಾನದಿಂದ ಕೆಳಗಿಳಿದಿದ್ದಾರೆ.

ಒಂದು ದಶಕದ ಕಾಲ ಕಂಪನಿಯ ಉನ್ನತ ಹುದ್ದೆಯಲ್ಲಿದ್ದು ಅದರ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತ ಮೂಲದ ಬೈಜು ಭಟ್ ಯಾವ ಕಾರಣಕ್ಕೆ ರಾಜೀನಾಮೆ ನೀಡಿದರು ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಕೆಲ ವರದಿ ಪ್ರಕಾರ ಅವರು ಬೇರೆ ಬಿಸಿನೆಸ್​ಗಳನ್ನು ಆರಂಭಿಸುವ ಸಲುವಾಗಿ ರಾಬಿನ್​ಹುಡ್ ಮಾರ್ಕೆಟ್ಸ್​ನಿಂದ ನಿರ್ಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಬೈಜು ಭಟ್ ಅವರು ರಾಬಿನ್​ಹುಡ್​ನ ನಿರ್ದೇಶಕ ಮಂಡಳಿಯಲ್ಲಿ ಸದಸ್ಯರಾಗಿ ಮುಂದುವರಿಯಲಿದ್ದಾರೆ. ವ್ಲಾದಿಮಿರ್ ಟೆನೆವ್ ಸಿಇಒ ಆಗಿ ಮುಂದುವರಿಯಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಬೈಜು ಪ್ರಫುಲ್​ಕುಮಾರ್ ಭಟ್ ಅಮೆರಿಕದ ವರ್ಜೀನಿಯಾ ರಾಜ್ಯದಲ್ಲಿ ಹುಟ್ಟಿ ಬೆಳೆದವರು. ಇವರ ತಂದೆ ಮತ್ತು ತಾಯಿ ಭಾರತದಿಂದ ಅಮೆರಿಕಕ್ಕೆ ವಲಸೆ ಹೋಗಿ ನೆಲಸಿದವರು. ಬೈಜು ಸ್ಟಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ಭೌತಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸ್ಟಾನ್​ಫೋರ್ಡ್​ನಲ್ಲಿ ಓದುವಾಗ ಸಹಪಾಠಿಯಾಗಿದ್ದ ಬಲ್ಗೇರಿಯಾ ಮೂಲದ ವ್ಲಾದಿಮಿರ್ ಟೆನೆವ್ ಅವರ ಜೊತೆ ಸೇರಿ 2013ರಲ್ಲಿ ರಾಬಿನ್​ಹುಡ್ ಎಂಬ ಟ್ರೇಡಿಂಗ್ ಪ್ಲಾಟ್​ಫಾರ್ಮ್ ಆರಂಭಿಸಿದರು.

Ashitha S

Recent Posts

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

4 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

28 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

42 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

1 hour ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago