Categories: ವಿದೇಶ

ಕ್ಷಿಪಣಿ ಬಳಸಿ ಉಕ್ರೇನ್‌ನ ವಿದ್ಯುತ್‌ ಸ್ಥಾವರ ಉಡಾಯಿಸಿದ ರಷ್ಯಾ

ಕೀವ್:‌ ಆರು ತಿಂಗಳಿನಿಂದ ಸಸತವಾಗಿ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾ ತನ್ನ ಗಮನವನ್ನು ಮೂಲಸೌಕರ್ಯಗಳ ಮೇಲೆ ತಿರುಗಿಸಿದ್ದು, ಕಿಪಣಿ ಹಾಗು ಡ್ರೋನ್‌ ಬಳಸಿ ಉಕ್ರೇನ್‌ನ ದೊಡ್ಡ ವಿದ್ಯುತ್ ಸ್ಥಾವರದ ಮೇಲೆ ದಾಳಿ ನಡೆಸಿ ಅದನ್ನು ನಾಶಪಡಿಸಿದೆ.

ಉಕ್ರೇನ್‌ನ ಕೀವ್‌, ಚೆರ್ಕಾಸಿ, ಝೈಟೊಮಿರ್ ಪ್ರದೇಶಗಳು ಸೇರಿದಂತೆ ೩೦ಲಕ್ಷ ಜನರಿಗೆ ವಿದ್ಯುತ್‌ ಒದಗಿಸುತ್ತಿದ್ದ ಟ್ರಿಪಿಲ್ಸ್ಕಾ ಸ್ಥಾವರದ ಮೇಲೆ ದಾಳಿಯಾಗಿದ್ದು, ಪರಿಣಾಮವಾಗಿ ಟ್ರಾನ್ಸ್ಫಾರ್ಮರ್, ಟರ್ಬೈನ್‌, ಜನರೇಟರ್‌ಗಳು ಹೊತ್ತಿ ಉರಿದಿವೆ.

ಸುರಕ್ಷಿತ ಅಡಗುತಾಣಗಳನ್ನು ಸೇರುವ ಮೂಲಕ ಕಾರ್ಮಿಕರು ಪ್ರಾಣವನ್ನು ರಕ್ಷಿಸಿಕೊಂಡಿದ್ದಾರೆ ಎಂದು ಸ್ಥಾವರವನ್ನು ನಿರ್ವಹಿಸುವ ಕಂಪನಿಯ ಮೇಲ್ವಿಚಾರಣಾ ಮಂಡಳಿಯ ಅಧ್ಯಕ್ಷ ಆಂಡ್ರಿ ಗೋಟಾ ಹೇಳಿದ್ದಾರೆ.

ಈ ದಾಳಿಯಿಂದಾಗಿ ಇಡೀ ಸ್ಥಾವರವು ಬೆಂಕಿಗೆ ಆಹುತಿಯಾಗಿ ಸುಟ್ಟು ಹೋಗಿದ್ದು, ಸುತ್ತಲು ದಟ್ಟ ಹೊಗೆ ಕವಿದಿತ್ತು. ಇದಾದ ಕೆಲ ಗಂಟೆಗಳ ನಂತರ ರಕ್ಷಣಾ ಸಿಬ್ಬಂದಿಗಳು ಅಶೇಷಗಳ ತೆರವು ಕಾರ್ಯಕ್ಕೆ ಕೈ ಹಾಕಿದರು ಎಂದು ಗೋಟ ಹೇಳಿದ್ದಾರೆ.

ರಷ್ಯಾದ ತೈಲ ಸಂಸ್ಕರಣಾಗಾರಗಳನ್ನು ಗುರಿಯಾಗಿಸಿ ಉಕ್ರೇನ್‌ ನಡೆಸಿದ ದಾಳಿಗೆ ಈ ಮೂಲಕ ಪ್ರತಿಕಾರ ತೀರಿಸಿಕೊಳ್ಳಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಹೇಳಿದ್ದಾರೆ.

Maithri S

Recent Posts

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

15 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

27 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

37 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

56 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

56 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 hour ago