ಭೂಕಂಪನಕ್ಕೆ ಅಲುಗಾಡಿದ ʼಸ್ಟ್ಯಾಚ್ಯೂ ಆಫ್ ಲಿಬರ್ಟಿʼ: ವಿಡಿಯೋ ವೈರಲ್

ಅಮೆರಿಕಾ: ನ್ಯೂಯಾರ್ಕ್‌ ನಗರದಲ್ಲಿ 4.8 ತೀವ್ರತೆಯ ಭೂಕಂಪನದ ಅನುಭವವಾಗಿದ್ದು, ಭೂಮಿಯ ಕಂಪನಕ್ಕೆ ಅಮೆರಿಕಾದ ಸ್ವಾತಂತ್ರದ ಪ್ರತಿಮೆ ಸ್ಟ್ಯಾಚ್ಯೂ ಆಫ್ ಲಿಬರ್ಟಿ ಅಲುಗಾಡಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಿನದ ಹಿಂದಷ್ಟೇ ಸ್ಟ್ಯಾಚ್ಯೂ ಆಫ್ ಲಿಬರ್ಟಿಗೆ ಸಿಡಿಲು ಬಡಿದಿತ್ತು. ನ್ಯೂಯಾರ್ಕ್ ನಗರದಲ್ಲಿ 4.8 ತೀವ್ರತೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಯಾವುದೇ ಹಾನಿಯಾಗಿಲ್ಲ.

ಅರ್ತ್‌ ಕ್ಯಾಮ್‌ನಲ್ಲಿ ಸೆರೆಯಾದ ದೃಶ್ಯಾವಳಿಯಲ್ಲಿ ಅಮೆರಿಕಾದ ಸ್ವಾತಂತ್ರ್ಯದ ಪ್ರತಿಮೆ ಅಲುಗುತ್ತಿರುವ ದೃಶ್ಯ ವೈರಲ್ ಆಗಿದೆ. ನ್ಯೂಜೆರ್ಸಿಯ ಕ್ಯಾಲಿಫೋನ್ ಬಳಿ ಭೂಕಂಪದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಘಟನೆಯ ಸಮಯದಲ್ಲಿ ಎಲ್ಲಿಸ್ ದ್ವೀಪವು ಅಲುಗಾತ್ತಿರುವುದು ಕಾಣಿಸುತ್ತಿದೆ ಲೇಡಿ ಲಿಬರ್ಟಿಯ ಪ್ರತಿಮೆಯೂ ಭೂಕಂಪನದ ಸಮಯದಲ್ಲಿ ಕೆಲ ಸೆಕೆಂಡ್ ಅಲುಗುವುದನ್ನು ಕೂಡ ನೋಡಬಹುದು.

ನ್ಯೂಯಾರ್ಕ್‌ನಲ್ಲಿ ಭೂಮಿ ಕಂಪಿಸಿ ಗಂಟೆಗಳ ನಂತರ ನ್ಯೂಜೆರ್ಸಿಯಲ್ಲಿಯೂ 4.0 ತೀವ್ರತೆಯ ಭೂ ಕಂಪನವಾಗಿದೆ. ಈ ವೇಳೆ ಗವರ್ನರ್ ಫಿಲ್ ಮರ್ಫಿ ಅವರು ತುರ್ತು ಮಾರ್ಗಸೂಚಿಗಳನ್ನು ಅನುಸರಿಸಲು ಸ್ಥಳೀಯ ನಿವಾಸಿಗಳಿಗೆ ಕರೆ ನೀಡಿದರು. ನ್ಯೂಜೆರ್ಸಿ ಈಗಷ್ಟೇ ಆಘಾತವನ್ನು ಅನುಭವಿಸಿದೆ. ದಯವಿಟ್ಟು ಕೆಳಗಿನ ತುರ್ತು ಮಾರ್ಗದರ್ಶನವನ್ನು ಅನುಸರಿಸಿ ಮತ್ತು ನಿಮಗೆ ನಿಜವಾದ ತುರ್ತು ಪರಿಸ್ಥಿತಿ ಇಲ್ಲದಿದ್ದರೆ 911 ಗೆ ಕರೆ ಮಾಡುವುದನ್ನು ತಪ್ಪಿಸಿ ಎಂದು ಅವರು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

Ashitha S

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

48 seconds ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

18 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

35 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

50 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago