ಚಂಡೀಗಢ: ‘ಆಪರೇಷನ್ ಬ್ಲೂಸ್ಟಾರ್’ ನ 39 ನೇ ವರ್ಷಾಚರಣೆ ವೇಳೆಯೇ ಕೆನಡಾದ ಪಂಜಾಬಿಗರ ಪ್ರಾಬಲ್ಯವಿರುವ ಬ್ರಾಂಪ್ಟನ್ನಲ್ಲಿ ಸಿಖ್ ಅಂಗರಕ್ಷಕರಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯನ್ನು ಬಿಂಬಿಸುವ ಟ್ಯಾಬ್ಲೋವನ್ನು ಪ್ರದರ್ಶಿಸಲಾಗಿದೆ.
ಮಾಜಿ ಪ್ರಧಾನಿ ಇಂದಿರಾ ಹತ್ಯೆಯನ್ನು ಬಿಂಬಿಸುವ ಟ್ಯಾಬ್ಲೋ ಇರಿಸಲಾಗಿದ್ದು, ಖಲಿಸ್ತಾನ್ ಧ್ವಜಗಳ ಪೋಸ್ಟರ್ ಅಂಟಿಸಲಾಗಿದೆ. ಆಪರೇಷನ್ ಬ್ಲೂಸ್ಟಾರ್’ಗೆ ಇಂದಿರಾ ಹತ್ಯೆ ಸೇಡಿನ ಕ್ರಮ ಎಂದು ಪೋಸ್ಟರ್ಗಳಲ್ಲಿ ಹೇಳಲಾಗಿದೆ.
1984 ರ ಜೂನ್ 1 ಮತ್ತು 8 ರ ನಡುವೆ ಅಮೃತಸರದಲ್ಲಿ ನಡೆದ ಭಾರತೀಯ ಸೇನೆಯ ‘ಆಪರೇಷನ್ ಬ್ಲೂಸ್ಟಾರ್’ನಲ್ಲಿ ಹಲವರು ಸಾವನಪ್ಪಿದ್ದರು. ಅಮೃತಸರದ ಗೋಲ್ಡನ್ ಟೆಂಪಲ್ ಮತ್ತು ಅದರ ಸಂಕೀರ್ಣಕ್ಕೆ ಹಾನಿಯಾಗಿತ್ತು. ಪ್ರತ್ಯೇಕತಾವಾದಿ ಉಗ್ರ ಜರ್ನೈಲ್ ಸಿಂಗ್ ಭಿಂದ್ರವಾಲೆ ನೇತೃತ್ವದ ಗುಂಪನ್ನು ಮಟ್ಟಹಾಕಲು ಅಂದಿನ ಪ್ರಧಾನಿ ಇಂದಿರಾ ಮಿಲಿಟರಿ ಕಾರ್ಯಾಚರಣೆಗೆ ಆದೇಶ ನೀಡಿದ್ದರು.
ಕೆನಾಡದಲ್ಲಿ ಈ ಹಿಂದೆ ಬ್ರಾಂಪ್ಟನ್ ಪ್ರಾಂತ್ಯದಲ್ಲಿ ‘ಭಾರತ ವಿರೋಧಿ’ ಗೀಚುಬರಹದೊಂದಿಗೆ ದೇವಾಲಯವೊಂದನ್ನು ಧ್ವಂಸ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಗೌರಿ ಶಂಕರ ದೇವಸ್ಥಾನದ ಮೇಲಿನ ದಾಳಿಯನ್ನು ಖಂಡಿಸಿ ಹೇಳಿಕೆ ನೀಡಿದ್ದರು.
ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಖಾ ವಿರುದ್ದ ಬ್ಯಾಟಿಂಗ್ ಮಾಡಿದ್ದಾರೆ.
ನಟನೊಬ್ಬ ನಟಿಸುತ್ತಾ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಯಲಹಂಕದ ಸಾತನೂರು ಗ್ರಾಮದಲ್ಲಿ ನಡೆದಿದೆ.
ಹಾಸನ ಜಿಲ್ಲೆಯಲ್ಲಿ ನಡೆದಿರುವ ಲೈಂಗಿಕ ಹಗರಣದ ಆರೋಪಿ ಜೆಡಿಎಸ್ ಸಂಸದ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ,…
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಈಗಾಗಲೇ ಬಾರಿ ಸದ್ದು…
ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ…
ಈಗಾಗಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಬಾರಿ ಸದ್ದು ಮಾಡುತ್ತಿದೆ. ಅಲ್ಲದೇ ಅವರ ತಂದೆ ಸಚಿವ ಹೆಚ್ಡಿ…