News Karnataka Kannada
Sunday, April 28 2024
ವಿದೇಶ

ನಿರಂತರ ಮೂರನೇ ದಿನ ಉಗ್ರಕೃತ್ಯ: ಪೊಲೀಸ್‌ ಕಾನ್‌ ಸ್ಟೆಬಲ್‌ ಹತ್ಯೆ ಮಾಡಿದ ಉಗ್ರರು

Terrorism continues for third day: Militants kill police constable
Photo Credit : News Kannada

ಶ್ರೀನಗರ: ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪೊಲೀಸರೊಬ್ಬರನ್ನು ಗುಂಡಿಕ್ಕಿ ಕೊಂದು ಹಾಕಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಕಳೆದ ಮೂರು ದಿನಗಳಲ್ಲಿ ನಡೆದ ಮೂರನೇ ಹತ್ಯೆಯಾಗಿದೆ.

ಪೊಲೀಸ್‌ ಕಾನ್ಸ್ಟೇಬಲ್ ಗುಲಾಮ್ ಮೊಹಮ್ಮದ್ ದಾರ್ ಅವರ ಬಾರಾಮುಲ್ಲಾದ ಕರಲ್ಪೋರಾ ಗ್ರಾಮದ ಮನೆಗೆ ನುಗ್ಗಿದ ಭಯೋತ್ಪಾದಕರು ಅವರನ್ನು ಗುಂಡಿಟ್ಟು ಕೊಂದು ಹಾಕಿದ್ದಾರೆ. ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆಗೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆಯಷ್ಟೆ ಪುಲ್ವಾಮಾದಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕನನ್ನು ಉಗ್ರರು ಗುಂಡಿಟ್ಟು ಕೊಂದು ಹಾಕಿದ್ದರು.
ಕಳೆದ ಭಾನುವಾರ ಶ್ರೀನಗರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಗುಂಡು ಹಾರಿಸಿದ್ದ ಘಟನೆ ನಡೆದಿತ್ತು. ನಿರಂತರ ದಾಳಿಯ ನಂತರ ಭದ್ರತಾ ಪಡೆಗಳು ಪುಲ್ವಾಮಾ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ವಾಹನಗಳು ಮತ್ತು ಪಾದಚಾರಿಗಳ ತಪಾಸಣೆಯನ್ನು ತೀವ್ರಗೊಳಿಸಿವೆ. ಶ್ರೀನಗರದ ಎಲ್ಲಾ ಪ್ರಮುಖ ನಿರ್ಗಮನ ಸ್ಥಳಗಳಲ್ಲಿ ಸಂಚಾರಿ ವಾಹನ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು