Categories: ವಿದೇಶ

ನಿಜ್ಜರ್‌ ಹತ್ಯೆ ವಿಚಾರದಲ್ಲಿ ಭಾರತ ವಿರುದ್ಧ ಷಡ್ಯಂತ್ರ ನಡೆದಿದೆ ಎಂದ ವರ್ಮಾ

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಏಜಂಟರ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಟ್ರುಡೊ ಹೇಳಿಕೆಗಳ ಬಳಿಕ ಉಭಯ ದೇಶಗಳ ಸಂಬಂಧ ತೀವ್ರವಾಗಿ ಹಳಸಿದೆ. ಇದೀಗ ಭಾರತೀಯ ರಾಜತಾಂತ್ರಿಕ ಸಂಜಯ್ ಕುಮಾರ್ ವರ್ಮಾ ಹೇಳಿಕೆಯೊಂದನ್ನು ನೀಡಿದ್ದು, ನಿಜ್ಜರ್‌ ಹತ್ಯೆ ಕುರಿತು ಸಾಕ್ಷ್ಯ ನೀಡುವಂತೆ ಕೆನಡಾಕ್ಕೆ ಸವಾಲು ಹಾಕಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ವರ್ಮಾ, ನಿಜ್ಜರ್ ಹತ್ಯೆಯಲ್ಲಿ ಭಾರತ ಅಥವಾ ಭಾರತೀಯ ಏಜೆಂಟ್‌ಗಳ ಕೈವಾಡವಿದೆ ಎಂದು ಹೇಳಲು ಉನ್ನತ ಮಟ್ಟದ ಯಾರೋ ಒಬ್ಬರು ಸೂಚನೆಗಳನ್ನು ನೀಡಿದ್ದಾರೆ ಎಂದು ತೋರುತ್ತದೆ ಎಂದು ಹೇಳಿದ್ದಾರೆ.

ನಿಜ್ಜರ್ ಹತ್ಯೆ ಕುರಿತು ಕೆನಡಾ ಅಥವಾ ಕೆನಡಾದ ಮಿತ್ರರಾಷ್ಟ್ರಗಳ ಮೂಲಕ ಭಾರತಕ್ಕೆ ಯಾವುದೇ ಖಚಿತವಾದ ಪುರಾವೆ ಇದುವರೆಗೆ ಕೊಟ್ಟಿಲ್ಲ. ಹೀಗಾಗಿ ಭಾರತ ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತೀಯ ಏಜೆಂಟ್‌ಗಳು ಭಾಗಿಯಾಗಿಲ್ಲ ಎಂದು ಖಚಿತವಾಗಿ ಹೇಳಬಹುದು.

ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ. ಕಳೆದ ಕೆಲತಿಂಗಳಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿದ್ದದೆ. ಆದರೆ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಮತ್ತು ವ್ಯಾಪಾರ ಒಪ್ಪಂದ ಮಾತುಕತೆ ನಡೆಸಲು ಕೆನಡಾದೊಂದಿಗೆ ಭಾರತ ಸಿದ್ಧವಿದೆ ಎಂದು ಅವರು ಹೇಳಿದ್ದಾರೆ.

Ashika S

Recent Posts

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

4 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

15 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

25 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

36 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

42 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

46 mins ago