ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುಹಾಕಿದೆ. ಆ ತಂಡದಲ್ಲಿದ್ದ ಉಳಿದ ಭಯೋತ್ಪಾದಕರು ಸತ್ತ ಭಯೋತ್ಪಾದಕರ ದೇಹಗಳೊಂದಿಗೆ ಪರಾರಿಯಾಗಿದ್ದಾರೆ.
ಸ್ಥಳದಿಂದ ಭದ್ರತಾ ಪಡೆಗಳು ಎರಡು ಎಕೆ ಸರಣಿ ರೈಫಲ್ಗಳು, ಆರು ಪಿಸ್ತೂಲ್ಗಳು ಮತ್ತು ನಾಲ್ಕು ಚೈನೀಸ್ ಗ್ರೆನೇಡ್ಗಳನ್ನು ವಶಪಡಿಸಿಕೊಂಡಿವೆ. ಪ್ರತಿಕೂಲ ಹವಾಮಾನದ ಕಾರಣ, ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹವಾಮಾನ ಸುಧಾರಿಸಿದ ನಂತರ ತಕ್ಷಣ ಕಾರ್ಯಾಚರಣೆ ಪುನರಾರಂಭಿಸಲಾಗುವುದು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.