ಸಿಡ್ನಿ: ಭಾರತೀಯ ಮೂಲದ ಆಸ್ಟ್ರೇಲಿಯನ್ ಸೆನೆಟರ್ ಒಬ್ಬರು “ಇತಿಹಾಸದಲ್ಲೇ ಮೊದಲ ಬಾರಿಗೆ ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ” ಸ್ವೀಕರಿಸಿ ಇತಿಹಾಸ ಸೃಷ್ಟಿಸಿದ್ದಾರೆ.
ಭಾರತೀಯ ಮೂಲದ ಬ್ಯಾರಿಸ್ಟರ್ ವರುಣ್ ಘೋಷ್ ಅವರು ಮಂಗಳವಾರ ಆಸ್ಟ್ರೇಲಿಯಾದ ಸಂಸತ್ತಿನಲ್ಲಿ ಭಗವದ್ಗೀತೆಯ ಮೇಲೆ ಕೈಯಿಟ್ಟು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ಹೀಗೆ ಮಾಡಿದ ಮೊದಲ ಭಾರತ ಸಂಜಾತ ಸದಸ್ಯರಾಗಿದ್ದಾರೆ.
ಪಶ್ಚಿಮ ಆಸ್ಟ್ರೇಲಿಯಾದಿಂದ ಬಂದಿರುವ ವರುಣ್, ಫೆಡರಲ್ ಸಂಸತ್ತಿನ ಸೆನೆಟ್ನಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಾರೆ. ಲೆಜಿಸ್ಲೇಟಿವ್ ಅಸೆಂಬ್ಲಿ ಮತ್ತು ಲೆಜಿಸ್ಲೇಟಿವ್ ಕೌನ್ಸಿಲ್ ಎರಡರಿಂದಲೂ ಬೆಂಬಲವನ್ನು ಪಡೆದ ನಂತರ ಘೋಷ್ ಅವರನ್ನು ಸೆನೆಟರ್ ಆಗಿ ನೇಮಿಸಲಾಯಿತು.
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ವರುಣ್ಗೆ ಶುಭ ಹಾರೈಸಿದ್ದಾರೆ. “ಪಶ್ಚಿಮ ಆಸ್ಟ್ರೇಲಿಯಾದ ನಮ್ಮ ಹೊಸ ಸೆನೆಟರ್ ವರುಣ್ ಘೋಷ್ ಅವರಿಗೆ ಸ್ವಾಗತ. ತಂಡದಲ್ಲಿ ನಿಮ್ಮನ್ನು ಹೊಂದಲು ಸಂತೋಷವಾಗಿದೆ” ಎಂದು ಅವರು Xನಲ್ಲಿ ಪೋಸ್ಟ್ ಮಾಡಿದ್ದಾರೆ.
ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅವರು ಘೋಷ್ ಅವರನ್ನು ಲೇಬರ್ ಸೆನೆಟ್ ತಂಡಕ್ಕೆ ಸ್ವಾಗತಿಸಿದರು. “ಪಶ್ಚಿಮ ಆಸ್ಟ್ರೇಲಿಯಾದ ನಮ್ಮ ಹೊಸ ಸೆನೆಟರ್ ವರುಣ್ ಘೋಷ್ ಅವರಿಗೆ ಸುಸ್ವಾಗತ. ಸೆನೆಟರ್ ಘೋಷ್ ಅವರು ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಆಸ್ಟ್ರೇಲಿಯಾದ ಸೆನೆಟರ್ ಆಗಿದ್ದಾರೆ. ನಾನು ಆಗಾಗ್ಗೆ ಹೇಳುತ್ತಿದ್ದೆ, ನೀವು ಯಾವುದಾದರೂ ವಿಷಯದಲ್ಲಿ ಮೊದಲಿಗರಾದಾಗ, ನೀವು ಕೊನೆಯವರೂ ಅಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಸೆನೆಟರ್ ಘೋಷ್ ಅವರ ಸಮುದಾಯಕ್ಕೆ ಮತ್ತು ಪಶ್ಚಿಮ ಆಸ್ಟ್ರೇಲಿಯನ್ನರಿಗೆ ಬಲವಾದ ಧ್ವನಿಯಾಗುತ್ತಾರೆ” ಎಂದು ಅವರು ಹೇಳಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…