Categories: ವಿದೇಶ

ಅಘ್ಘಾನಿಸ್ತಾನ: ಹಿಜಾಬ್‌ ಧರಿಸದ ಮಹಿಳೆಯ ತಂದೆ- ಪತಿಗೆ ಶಿಕ್ಷೆ!

ಅಫ್ಘಾನಿಸ್ತಾನ:  ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸುವುದು ಕಡ್ಡಾಯಗೊಳಿಸಿ ತಾಲಿಬಾನ್ ಆದೇಶ ಹೊರಡಿಸಿದ್ದು, ಅದನ್ನು ಉಲ್ಲಂಘಿಸಿದರೆ ಆಕೆಯ ತಂದೆ ಅಥವಾ ಪುರುಷ ಸಂಬಂಧಿಗೆ ಸೆರೆವಾಸ ವಿಧಿಸುವ ಕಾನೂನು ಜಾರಿಗೊಳಿಸಿದೆ.

ಈ ಕಾನೂನಿನ ಪ್ರಕಾರ, ಮಹಿಳೆ ಹಿಜಾಬ್ ಧರಿಸದಿದ್ದರೆ ಮೊದಲು ಆಕೆಯ ಪೋಷಕರಿಗೆ (ತಂದೆ, ಸಹೋದರ ಅಥವಾ ಪತಿ) ಎಚ್ಚರಿಕೆ ನೀಡಲಾಗುತ್ತದೆ. ಆಕೆ ಮತ್ತೆ ತಪ್ಪು ಪುನರಾವರ್ತಿಸಿದರೆ ಆಕೆಯ ಕುಟುಂಬ ಸದಸ್ಯನಿಗೆ ಸೆರೆವಾಸ ವಿಧಿಸಲಾಗುವುದು.

ಇದಲ್ಲದೆ, ಮಹಿಳಾ ಸಾರ್ವಜನಿಕ ಉದ್ಯೋಗಿಗಳು ಹಿಜಾಬ್ ಧರಿಸದಿದ್ದರೆ ಅವರನ್ನು ಕೆಲಸದಿಂದ ವಜಾಗೊಳಿಸಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗದಲ್ಲಿರುವ ಪುರುಷ ನೌಕರನ ಕುಟುಂಬದ ಮಹಿಳಾ ಸದಸ್ಯರು ಹಿಜಾಬ್ ಧರಿಸದಿದ್ದರೆ ಆತನನ್ನೂ ಕೆಲಸದಿಂದ ಅಮಾನತುಗೊಳಿಸಲಾಗುತ್ತದೆ.

“ಶರಿಯಾ ಕಾನೂನಿನ ಪ್ರಕಾರ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸಲೇಬೇಕು ಎಂಬ ಸಂದೇಶವಿರುವ ಪೋಸ್ಟರ್‌ ಗಳನ್ನು ತಾಲೀಬಾನಿಗಳು ಎಲ್ಲಾ ಕೆಫೆಗಳು ಮತ್ತು ಅಂಗಡಿಗಳ ಮೇಲೆ ಅಂಟಿಸಿದ್ದಾರೆ.

ಈ ಪೋಸ್ಟರ್‌ಗಳಲ್ಲಿ ಮುಖ ಮುಚ್ಚುವ ಬುರ್ಖಾದ ಚಿತ್ರವಿದೆ. ತಾಲೀಬಾನಿಗಳು ಮಹಿಳೆಯರ ಮೇಲೆ ಹೇರುತ್ತಿರುವ ನಿರ್ಬಂಧಗಳಿಗೆ ವಿಶ್ವಾದ್ಯಂತ ಖಂಡನೆಯು ಹೆಚ್ಚಾಗುತ್ತಿದೆ. ಇತ್ತಿಚೆಗೆ ಬಾಲಕಿಯರ ಶಾಲೆ ಮುಚ್ಚುವ, ಡ್ರೈವಿಂಗ್‌ ಲೈಸನ್ಸ್ ಕಸಿದುಕೊಳ್ಳುವ ಮೂಲಕ ತಾಲೀಬಾನ್ ಆಡಳಿತವು ಮಹಿಳೆಯರ ಮೇಲೆ ಹಲವಾರು ಕಟ್ಟುಪಾಡುಗಳನ್ನು ಹೇರಿದೆ.

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

35 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago