ಕಾಬೂಲ್ : ಅಪ್ಘಾನಿಸ್ತಾನದ ಬಹುತೇಕ ಪ್ರದೇಶಗಳಲ್ಲಿ ಹಿಮ ಹಾಗೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಅಲ್ಲಿನ ಜನರು ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದಾರೆ.
ವಿಪತ್ತು ನಿರ್ವಹಣಾ ಸಚಿವಾಲಯದ ಅಧಿಕಾರಿ ಫ್ರೀ ಆಫ್ ಅಪ್ಘಾನಿಸ್ತಾನ್ ರೇಡಿಯೊಂದಿಗೆ ಮಾತನಾಡಿದ್ದು, ಪ್ರತಿಕೂಲ ಹವಾಮಾನ ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಲ್ಲದೇ, ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಅಗತ್ಯ ದಿನಬಳಕೆಯ ವಸ್ತುಗಳನ್ನು ಸಾಗಿಸಲಾಗುತ್ತಿದೆ. ಪ್ರತಿಕೂಲ ವಾತಾವರಣವಿರುವ ಜನರಿಗೆ ಧೈರ್ಯ ತುಂಬಬೇಕು. ಅವರಿಗೆ ಅಗತ್ಯ ವಸ್ತುಗಳು ಸಿಗುವಂತೆ ಮಾಡಬೇಕು ಎಂದು ಸೂಚಿಸಿದ್ದಾರೆ ಎಂದು ಅಲ್ಲಿನ ಖಾಮಾ ಪ್ರೆಸ್ ವರದಿ ಮಾಡಿದೆ.
ಸದ್ಯ ಅಲ್ಲಿನ 32 ಪ್ರಾಂತ್ಯಗಳಲ್ಲಿ ಭಾರೀ ಹಿಮದ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ರಸ್ತೆಗಳು ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಅಲ್ಲದೇ, ಈ ಪ್ರದೇಶಗಳಲ್ಲಿ ಪ್ರವಾಹ ಕೂಡ ಸೃಷ್ಟಿಯಾಗುತ್ತಿದೆ. ಈಗಾಗಲೇ ಹಿಮದ ಮಳೆಗೆ ಸಿಲುಕಿ 26 ಜನ ಗಾಯಗೊಂಡು, 7 ಜನ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಿಂದ ಅಲ್ಲಿ ಹಿಮದ ಮಳೆ ಸುರಿಯುತ್ತಿದೆ ಎಂದು ತಿಳಿದು ಬಂದಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…