ವಿದೇಶ

ಅಮೆರಿಕ: ಮಾನವನಿಗೆ ಹಂದಿ ಹೃದಯ ಕಸಿ, ಶಸ್ತ್ರಚಿಕಿತ್ಸೆಯಲ್ಲಿ ಯಶಸ್ವಿಯಾದ ವೈದ್ಯರು

ಲೆಕ್ಸಿಂಗ್ಟನ್ (ಅಮೆರಿಕ) : ವೈದ್ಯರು ಹಂದಿಯ ಹೃದಯವನ್ನು ರೋಗಿಯಲ್ಲಿ ಅಳವಡಿಸಿ, ಅವರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯಕೀಯ ವಿಜ್ಞಾನದಲ್ಲಿ ಈ ಮೂಲಕ ನೂತನ ಸಾಧನೆ ಮಾಡಲಾಗಿದೆ.

ಹಂದಿಯ ಹೃದಯದಿಂದಲೂ ಮಾನವ ಜೀವನ ಉಳಿಸಬಹುದು ಮತ್ತು ಪ್ರಾಣಿಗಳ ಅಂಗಾಂಗಗಳನ್ನ ಬಳಸಿಕೊಂಡು ಪ್ರಾಣ ಉಳಿಸಬಹುದು ಎಂಬುದನ್ನು ಈ ಅನ್ವೇಷಣೆ ಹಾಗೂ ಶಸ್ತ್ರಚಿಕಿತ್ಸೆ ತೋರಿಸಿಕೊಟ್ಟಿದೆ. ಶಸ್ತ್ರಚಿಕಿತ್ಸೆಯ ಮೂರು ದಿನಗಳ ನಂತರ ರೋಗಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮೇರಿಲ್ಯಾಂಡ್ ಸ್ಕೂಲ್ ಆಫ್ ಮೆಡಿಸಿನ್ ವಿಶ್ವವಿದ್ಯಾಲಯದ ವೈದ್ಯರು ತಿಳಿಸಿದ್ದಾರೆ.

57 ವರ್ಷ ವಯಸ್ಸಿನ ಡೇವಿಡ್ ಬೆನೆಟ್ ತೀವ್ರವಾದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಶುಕ್ರವಾರ ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಿ ಹಂದಿ ಹೃದಯವನ್ನು ಯಶಸ್ವಿಯಾಗಿ ಜೋಡನೆ ಮಾಡಿ ಬದುಕಿಸಲಾಗಿತ್ತು. ಈ ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಮಾನವನ ದೇಹದಲ್ಲಿ ಪ್ರಾಣಿಗಳ ಹೃದಯವು ಚನ್ನಾಗಿಯೇ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ದೃಢೀಕರಿಸಲಾಗಿದೆ.

ಶಸ್ತ್ರಚಿಕಿತ್ಸೆಗಳಿಗೆ ಬೇಕಾದ ಮಾನವ ಅಂಗಾಗಗಳ ಕೊರತೆಯಿರುವ ಈ ಸಂದರ್ಭದಲ್ಲಿ ಪ್ರಾಣಿಗಳ ಅಂಗಗಳನ್ನು ಹೇಗೆ ಬಳಸುವುದು ಎಂಬುದನ್ನು ತಿಳಿಯಲು ಅನ್ವೇಷಣೆಗಳು ನಡೆಯುತ್ತಿವೆ. ಈ ಅನ್ವೇಷಣೆಗೆ ಅಮೆರಿಕ​ ವೈದ್ಯರು ನಡೆಸಿರುವ ಈ ಶಸ್ತ್ರಚಿಕಿತ್ಸೆ ಹಲವರಿಗೆ ಪ್ರೇರಣೆಯಾಗಿದೆ.

Gayathri SG

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

5 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

15 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

28 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago