Categories: ವಿದೇಶ

ಇಂದಿನಿಂದ ಯುರೋಪ್‌ ಗೆ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದ ರಷ್ಯಾದ ಏರೋಫ್ಲಾಟ್‌

ಯುಕೆಯಿಂದ ವಿಮಾನ ಹಾರಟ ನಿಷೇಧ ಅನುಭಸಿದ ಬಳಿಕ, ಈಗ ರಷ್ಯಾದ ಏರೋಫ್ಲಾಟ್‌ ಇಂದಿನಿಂದ ಯುರೋಪ್‌ ಗೆ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ.

ಈ ಹಿಂದೆ ಯುಕೆ ವಿಮಾನಯಾನ ಪ್ರಾಧಿಕಾರ ಸರ್ಕಾರದ ಮುಂದಿನ ಆದೇಶದವರೆಗೆ ಏರೋಫ್ಲಾಟ್‌ ಅನ್ನು ಅಮಾನತುಗೊಳಿಸಿತ್ತು. ಇದರ ಬೆನ್ನಲ್ಲೇ ರಷ್ಯಾ ಸಂಸ್ಥೆಯಾದ ಏರೋಫ್ಲಾಟ್‌ ಕೂಡ ಯುರೋಪ್‌ ಗೆ ತನ್ನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಯುರೋಪ್‌ ವಿದೇಶಾಂಗ ನೀತಿ ಮುಖ್ಯಸ್ಥ ಜೋಸೆಫ್‌ ಬೊರೆಲ್‌, ರಷ್ಯಾ ವಿಮಾನಗಳ ಸಂಚಾರಕ್ಕೆ ತನ್ನ ವಾಯು ಪ್ರದೇಶವನ್ನು ಮುಚ್ಚಲು ಯುರೋಪಿಯನ್‌ ಯೂನಿಯನ್‌ ನಿರ್ಧರಿಸಿದೆ.

ಉಕ್ರೇನ್‌ ಮೇಲಿನ ದಾಳಿ ಖಂಡಿಸಿ, ಜಾಗತಿಕ  ಸಮುದಾಯಗಳು ರಷ್ಯಾ ಮೇಲೆ ಆಕ್ರೋಶ ವ್ಯಕ್ತಪಡಿಸಿದೆ. ಯುಕೆ ಮಾತ್ರವಲ್ಲದೆ ಕೆನಡಾ, ಬೆಲ್ಜಿಯಂ ಸೇರಿದಂತೆ ಹಲವು ರಾಷ್ಟ್ರಗಳು ರಷ್ಯಾಕ್ಕೆ ವಿಮಾನಗಳ ಸಂಚಾರವನ್ನು ನಿಷೇಧಿಸಿದೆ.

ಬಲ್ಗೇರಿಯಾ, ಪೋಲೆಂಡ್, ಜೆಕ್ ಗಣರಾಜ್ಯ, ಈಸ್ಟೊನಿಯ, ಲಾಟ್ವಿಯಾ, ಲಿಥುವೇನಿಯಾ, ಜೆರ್ಮನಿ, ಸ್ಲೋವೇನಿಯಾ, ಫಿನ್‌ಲ್ಯಾಂಡ್ ಮತ್ತು ಡೆನ್ಮಾರ್ಕ್‌ ದೇಶಗಳು ಕೂಡ ರಷ್ಯಾ ವಿಮಾನಗಳಿಗೆ ತಡೆ ಹಾಕಿದೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago