ಕೀವ್ : ಉಕ್ರೇನ್-ರಷ್ಯಾ ದೇಶಗಳ ನಡುವೆ ಯುದ್ಧ ಮುಂದುವರೆದಿದ್ದು, ರಷ್ಯಾ ಸೇನೆಯ ಶೆಲ್ ದಾಳಿಗೆ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ತಿಳಿಸಿದೆ.ರಷ್ಯಾ-ಉಕ್ರೇನ್ ದೇಶಗಳ ನಡುವೆ ಸೋಮವಾರ ನಡೆದ ಮೊದಲ ಸುತ್ತಿನ ಮಾತುಕತೆಗಳು ಯಾವುದೇ ಸ್ಪಷ್ಟವಾದ ಫಲಿತಾಂಶಗಳನ್ನು ನೀಡದ ಹಿನ್ನೆಲೆಯಲ್ಲಿ ರಷ್ಯಾ ಮತ್ತು ಉಕ್ರೇನ್ ಮತ್ತೊಮ್ಮೆ ಮಾತುಕತೆ ನಡೆಸಲು ನಿರ್ಧರಿಸಿವೆ.
ರಷ್ಯಾ ಸೇನೆಯು ಉಕ್ರೇನ್ ನ ಪ್ರಮುಖ ನಗರಗಳ ಮೇಲೆ ಶೆಲ್ ದಾಳಿ ನಡೆಸಿದ್ದು, ದಾಳಿ ವೇಳೆ 11 ಮಂದಿ ಮೃತಪಟ್ಟಿದ್ದಾರೆ.
ಹಲವರಿಗೆ ಗಾಯಗಳಾಗಿವೆ ಎಂದು ಉಕ್ರೇನ್ ಮಾಹಿತಿ ನೀಡಿದೆ. ಉಕ್ರೇನ್ ಮತ್ತು ರಷ್ಯಾದ ನಡುವೆ ಯುದ್ಧ ಮುಂದುವರೆದಿದ್ದು, ಮೊದಲ ಸುತ್ತಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಇಂದು ಎರಡನೇ ಸುತ್ತಿನ ಮಾತುಕತೆ ಆಯೋಜಿಸಲಾಗಿದೆ ಎಂದು ವರದಿಯಾಗಿದೆ.
ಸೋಮವಾರ ಬೆಲಾರಸ್ನ ಗಡಿ ಪಟ್ಟಣವಾದ ಗೋಮೆಲ್ನಲ್ಲಿ ನಡೆದ ಮೊದಲ ಸುತ್ತಿನ ಮಾತುಕತೆ ವಿಫಲವಾಗಿತ್ತು. ಹೀಗಾಗಿ, ಇಂದು ನಡೆಯಲಿರುವ ಎರಡನೇ ಹಂತದ ಮಾತುಕತೆ ಕುತೂಹಲ ಮೂಡಿಸಿದೆ.
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.