ವಿದೇಶ

ಉಕ್ರೇನ್‌ ಸೇನಾ ನೆಲೆಯ ಮೇಲೆ ರಷ್ಯಾ ವಾಯು ಪಡೆ ದಾಳಿ: ಕನಿಷ್ಠ 9 ಮಂದಿ ಸಾವು

ಲಿವಿವ್‌: ಉಕ್ರೇನ್‌ನ ಸೇನಾ ನೆಲೆಯ ಮೇಲೆ ರಷ್ಯಾದ ವಾಯು ಪಡೆ ಆಕ್ರಮಣ ನಡೆಸಿದ್ದು, ಕನಿಷ್ಠ ಒಂಭತ್ತು ಮಂದಿ ಸಾವಿಗೀಡಾಗಿದ್ದಾರೆ ಹಾಗೂ 57 ಮಂದಿ ಗಾಯಗೊಂಡಿದ್ದಾರೆ.ಉಕ್ರೇನ್‌ನ ಪಶ್ಚಿಮ ಭಾಗದಲ್ಲಿ ರಷ್ಯಾ ನಡೆಸಿರುವ ಅತಿ ದೊಡ್ಡ ದಾಳಿ ಇದಾಗಿದೆ.

ಪೋಲೆಂಡ್‌ನ ಗಡಿಗೆ ಸಮೀಪದಲ್ಲಿ ಭಾನುವಾರ ವೈಮಾನಿಕ ದಾಳಿ ನಡೆದಿರುವುದಾಗಿ ಉಕ್ರೇನ್‌ ಅಧಿಕಾರಿಗಳು ತಿಳಿಸಿದ್ದಾರೆ.ದಾಳಿ ನಡೆದಿರುವ ಸ್ಥಳವು ಪೋಲೆಂಡ್‌ ಗಡಿ ಭಾಗಕ್ಕೆ 25 ಕಿ.ಮೀ. ದೂರದಲ್ಲಿದೆ. ನ್ಯಾಟೊ ಪಡೆಗಳೊಂದಿಗೆ ಜಂಟಿ ಸಮರಾಭ್ಯಾಸ ಚಟುವಟಿಕೆಗಳನ್ನು ಇಲ್ಲಿನ ಸೇನಾ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿತ್ತು.

ಯವೊರಿವ್‌ನ ಅಂತರರಾಷ್ಟ್ರೀಯ ಶಾಂತಿಪಾಲನ ಮತ್ತು ಭದ್ರತಾ ಕೇಂದ್ರದಲ್ಲಿ ವಿದೇಶಿ ಮಿಲಿಟರಿ ತರಬೇತುದಾರರು ಈ ಹಿಂದೆ ಕಾರ್ಯನಿರ್ವಹಿಸಿದ್ದರು. ದಾಳಿಯ ಸಂದರ್ಭದಲ್ಲಿ ಕೇಂದ್ರದಲ್ಲಿ ಅವರ ಇರುವಿಕೆಯ ಬಗ್ಗೆ ತಿಳಿದು ಬಂದಿಲ್ಲ.

ಸ್ಥಳೀಯ ಗವರ್ನರ್‌ ಮಾಕ್ಸಿಮ್‌ ಅವರ ಪ್ರಕಾರ, ರಷ್ಯಾದ ವಿಮಾನಗಳು ಸುಮಾರು 30 ರಾಕೆಟ್‌ಗಳನ್ನು ಸೇನಾ ನೆಲೆಯ ಮೇಲೆ ಉಡಾಯಿಸಿವೆ. ಇಡೀ ಪ್ರವೇಶದಲ್ಲಿ ದಟ್ಟ ಹೊಗೆ ಆವರಿಸಿದ್ದು, 19ಕ್ಕೂ ಹೆಚ್ಚು ಆಯಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಉಕ್ರೇನ್‌ ನೆಲದಲ್ಲಿ ದಾಳಿ ನಡೆದಿರುವುದನ್ನು ಪೋಲೆಂಡ್‌ ಖಂಡಿಸಿರುವುದಾಗಿ ಪೋಲೆಂಡ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಉಕ್ರೇನ್‌ನ ಪಶ್ಚಿಮ ಭಾಗದಲ್ಲಿ ರಷ್ಯಾ ಪಡೆಗಳು ವಿಮಾನ ನಿಲ್ದಾಣಗಳ ಮೇಲೆ ದಾಳಿ ಮುಂದುವರಿಸಿರುವುದಾಗಿ ವರದಿಯಾಗಿದೆ.

Swathi MG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

23 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

48 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago