News Karnataka Kannada
Wednesday, May 08 2024
ವಿದೇಶ

ಉತ್ತರ ಮ್ಯಾನ್ಮಾರ್‌: ಭೂಕುಸಿತ, 70 ಮಂದಿ ನಾಪತ್ತೆ

Karwar: Make community health officers permanent as per central government guidelines
Photo Credit :

ಬ್ಯಾಂಕಾಕ್ : ಉತ್ತರ ಮ್ಯಾನ್ಮಾರ್‌ನ ಕಚಿನ್‌ ರಾಜ್ಯದ ಪಕಂತ್‌ನ ಗಣಿಯಲ್ಲಿ ಬುಧವಾರ ಭೂಕುಸಿತವಾಗಿದ್ದು, 70 ಮಂದಿ ನಾಪತ್ತೆಯಾಗಿದ್ದಾರೆ. ಇವರಿಗಾಗಿ ಶೋಧಕಾರ್ಯ ನಡೆದಿದೆ.

ಗಯುನಾರ್‌ ರಕ್ಷಣಾ ತಂಡದ ನ್ಯೊ ಚಾ ಅವರು, ‘ಶೋಧ ಕಾರ್ಯ ನಡೆದಿದೆ. ಅಕ್ಕಪಕ್ಕದ ಗಣಿಗಳ ಮಣ್ಣು, ತ್ಯಾಜ್ಯ 60 ಮೀಟರ್‌ನಷ್ಟು ಕುಸಿದಿದೆ. ಐವರು ಮಹಿಳೆಯರು ಮಣ್ಣಿನೊಳಗೆ ಸಿಲುಕಿದ್ದರು. ಒಬ್ಬನ ಶವವನ್ನು ತೆಗೆಯಲಾಗಿದೆ’ ಎಂದು ತಿಳಿಸಿದ್ದಾರೆ.

ರಕ್ಷಣಾ ಮತ್ತು ಅಗ್ನಿಶಾಮಕ ಸೇವೆಯ 150 ಸಿಬ್ಬಂದಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಬೆಟ್ಟ ಪ್ರದೇಶವಾಗಿರುವ ಇದು ಕಚಿನ್‌ ರಾಜ್ಯದ ದುರ್ಗಮ ಸ್ಥಳವಾಗಿದೆ. ಮ್ಯಾನ್ಮಾರ್‌ನ ದೊಡ್ಡ ನಗರ ಯಾಂಗಾನ್‌ನಿಂದ 950 ಕಿ.ಮೀ. ದೂರದಲ್ಲಿದೆ. ಅಪರೂಪದ, ಮೌಲ್ಯಯುತ ಕಲ್ಲುಗಳ ನಿಕ್ಷೇಪ ಇಲ್ಲಿದೆ.

ಪಕಂತ್‌ ಪ್ರದೇಶದಲ್ಲಿರುವ ಗಣಿಯು ದುಬಾರಿ ಮೌಲ್ಯದ ಕಲ್ಲುಗಳ ಗಣಿಗಾರಿಕೆ ನಡೆಯುವ ಅತ್ಯಂತ ದೊಡ್ಡ ಗಣಿ. ಇದು, ಮ್ಯಾನ್ಮಾರ್ ಸೇನೆ ಮತ್ತು ಗೊರಿಲ್ಲಾ ಪಡೆಗಳ ನಡುವೆ ತೀವ್ರ ಘರ್ಷಣೆಯು ನಡೆದಿದ್ದ ಸ್ಥಳವೂ ಹೌದು.

ಸುರಕ್ಷತೆ ಕ್ರಮವಹಿಸಿಲ್ಲ ಎಂದು ಸ್ಥಳೀಯ ಆಡಳಿತವು ಅನೇಕ ಗಣಿಗಳ ಲೈಸೆನ್ಸ್‌ ರದ್ದುಪಡಿಸಿತ್ತು. ಅಸುರಕ್ಷತೆ ನಡುವೆಯೇ ಗಣಿಗಾರಿಕೆ ಮುಂದುವರಿದಿದೆ. ಭೂಕುಸಿತದಿಂದಾಗಿ 2020ರ ಜುಲೈನಲ್ಲಿ 162 ಹಾಗೂ 2015ರ ನವೆಂಬರ್‌ನಲ್ಲಿ 113 ಮಂದಿ ಮೃತಪಟ್ಟಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು