ವಿದೇಶ

ಕರೋನಾ ಮೊದಲ ಕೇಸ್ ಪತ್ತೆ, ನ್ಯೂಜಿಲೆಂಡ್ 3 ದಿನ ಲಾಕ್

ವೆಲ್ಲಿಂಗ್ಟನ್‌: ಓರ್ವ ವ್ಯಕ್ತಿಯಲ್ಲಿ  ಕೊರೋನಾ ಪಾಸಿಟಿವ್ ಬಂದ  ಕಾರಣ , ನ್ಯೂಜಿಲೆಂಡ್‌ನಲ್ಲಿ ದೇಶಾದ್ಯಂತ ಮೂರು ದಿನ ಲಾಕ್ಡೌನ್‌ ಘೋಷಿಸಲಾಗಿದೆ.

ವಿದೇಶಗಳಲ್ಲಿ ಸೋಂಕಿನಿಂದ ಏನಾಗಿದೆ ಎಂಬ ವಿಷಯ ನಮ್ಮ ಕಣ್ಣ ಮುಂದಿದೆ. ಹೀಗಾಗಿ ನಾವು ಯಾವುದೇ ಅಪಾಯವನ್ನು ಮೈಮೇಲೆ ಎಳೆದುಕೊಳ್ಳಲು ಸಿದ್ದರಿಲ್ಲ. ಹೀಗಾಗಿ ಸೋಂಕಿತ ವ್ಯಕ್ತಿಯಾದ ಪತ್ತೆ ಆಕ್ಲೆಂಡ್‌ ಮತ್ತು ಆತ ಭೇಟಿ ನೀಡಿದ್ದ ಕೊರೋಮಂಡೆಲ್‌ನಲ್ಲಿ 7 ದಿನಗಳ ಕಾಲ ಲಾಕ್ಡೌನ್‌ ಜಾರಿ ಮಾಡಲಾಗುವುದು. ಉಳಿದ ಪ್ರದೇಶಗಳಲ್ಲಿ ಮೂರು ದಿನ ಲಾಕ್ಡೌನ್‌ ಜಾರಿಯಲ್ಲಿರಲಿದೆ ಎಂದು ಪ್ರಧಾನಿ ಜೆಸಿಂಡಾ ಆ್ಯರ್ಡೆನ್‌ ಪ್ರಕಟಿಸಿದ್ದಾರೆ.
ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ, ಜನ ಮಾಲ್‌, ಸೂಪರ್‌ ಮಾರ್ಕೆಟ್‌ಗಳ ಮುಂದೆ ಸರದಿ ನಿಂತು ಅಗತ್ಯ ವಸ್ತು ಖರೀದಿಗೆ ಮುಂದಾಗಿದ್ದಾರೆ. ದೇಶದಲ್ಲಿ 6 ತಿಂಗಳ ಬಳಿಕ ಮೊದಲ ಕೇಸು ಪತ್ತೆಯಾಗಿದೆ.

50 ಲಕ್ಷ ಜನಸಂಖ್ಯೆ ಹೊಂದಿರುವ ನ್ಯೂಜಿಲೆಂಡ್‌ನಲ್ಲಿ ಇದುವರೆಗೆ 2926 ಜನರಿಗೆ ಸೋಂಕು ತಗುಲಿದ್ದು, 26 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಮತ್ತೊಂದೆಡೆ ಮುಂದುವರೆದ ದೇಶಗಳಿಗೆ ಹೋಲಿಸಿದರೆ ನ್ಯೂಜಿಲೆಂಡ್‌ನಲ್ಲಿ ಲಸಿಕೆ ವಿತರಣೆ ಪ್ರಮಾಣವೂ ಬಹಳ ಕಡಿಮೆ ಇದೆ. ಶೇ.32ರಷ್ಟುಜನರು ಸಿಂಗಲ್‌ ಡೋಸ್‌ ಮತ್ತು ಶೇ.18ರಷ್ಟುಜನರು ಮಾತ್ರವೇ ಎರಡೂ ಡೋಸ್‌ ಪಡೆದುಕೊಂಡಿದ್ದಾರೆ.

Raksha Deshpande

Recent Posts

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

7 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

10 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

11 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

27 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

34 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

41 mins ago