News Karnataka Kannada
Monday, May 06 2024
ವಿದೇಶ

ಕೆನಡಾದಲ್ಲಿ ಭೀಕರ ಚಳಿಗೆ ಸಿಲುಕಿ ನಾಲ್ವರು ಭಾರತೀಯರ ಸಾವು

Snowfall
Photo Credit :

 ಕೆನಡಾ: ಜನವರಿ 19, 2022 ರಂದು ಕೆನಡಾ-ಅಮೆರಿಕ ಗಡಿ ಮ್ಯಾನಿಟೋಬಾದ ಬಳಿ ತೀವ್ರ ಚಳಿಯಿಂದ ಹೆ‍ಪ್ಪುಗಟ್ಟಿ ಮೃತಪಟ್ಟ ಶಿಶು ಸೇರಿದಂತೆ ನಾಲ್ಕು ಶವಗಳು ಪತ್ತೆಯಾಗಿದ್ದವು. ಇದೀಗ, ಕೆನಡಾದ ಅಧಿಕಾರಿಗಳು ನಾಲ್ವರ ಗುರುತುಗಳನ್ನು ದೃಢಪಡಿಸಿದ್ದಾರೆ. ನಾಲ್ವರೂ ಭಾರತೀಯ ಪ್ರಜೆಗಳಾಗಿದ್ದಾರೆ. ಮೃತರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ’ಎಂದು ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೆನಡಾದ ಅಧಿಕಾರಿಗಳು ಗುರುವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಮೃತರನ್ನು ಜಗದೀಶ್ ಬಲದೇವ್‌ಭಾಯ್ ಪಟೇಲ್ (39), ವೈಶಾಲಿಬೆನ್ ಜಗದೀಶ್‌ಕುಮಾರ್ ಪಟೇಲ್ (37), ವಿಹಂಗಿ ಜಗದೀಶ್‌ಕುಮಾರ್ ಪಟೇಲ್ (11), ಧಾರ್ಮಿಕ್ ಜಗದೀಶ್‌ಕುಮಾರ್ ಪಟೇಲ್ (3) ಎಂದು ಗುರುತಿಸಿರುವುದಾಗಿ ತಿಳಿಸಿದ್ದಾರೆ.

ಭಾರತದ ಹೈಕಮಿಷನ್‌ನ ಅಧಿಕಾರಿಗಳು ಮೃತರ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದು, ಬೇಕಾದ ನೆರವನ್ನು ಒದಗಿಸುತ್ತಿದ್ದಾರೆ.

ಜನವರಿ 19 ರಂದು, ಮ್ಯಾನಿಟೋಬಾ ರಾಯಲ್ ಕೆನಡಿಯನ್ ಮೌಂಟೆಡ್ ಪೋಲೀಸರು (ಆರ್‌ಸಿಎಂಪಿ) ಇಬ್ಬರು ವಯಸ್ಕರು, ಹದಿಹರೆಯದವರು ಮತ್ತು ಶಿಶುಗಳು ಸೇರಿ ನಾಲ್ಕು ಜನರ ಶವಗಳು ದಕ್ಷಿಣ ಕೇಂದ್ರ ಮ್ಯಾನಿಟೋಬಾದ ಎಮರ್ಸನ್ ಪ್ರದೇಶದ ಬಳಿಯ ಅಮೆರಿಕ / ಕೆನಡಾ ಗಡಿಯ ಕೆನಡಾದ ಭಾಗದಲ್ಲಿ ಕಂಡುಬಂದಿವೆ ಎಂದು ಹೇಳಿದ್ದರು.

ಗುಜರಾತ್ ಅಪರಾಧ ತನಿಖಾ ಇಲಾಖೆಯು ಮೃತ ಕುಟುಂಬದ ಸದಸ್ಯರು ಸ್ಥಳೀಯ ಏಜೆಂಟರ ಸಹಾಯವನ್ನು ಪಡೆದಿದ್ದಾರೆಯೇ ಎಂದು ತನಿಖೆ ನಡೆಸುತ್ತಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ವೈದ್ಯಕೀಯ ಪರೀಕ್ಷೆಯ ನಂತರ, ನಾಲ್ವರೂ ಹೊರಗಿನ ಭೀಕರ ಚಳಿಗೆ ಒಡ್ಡಿಕೊಂಡಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಕೆನಡಾ ಅಧಿಕಾರಿಗಳು ಖಚಿತಪಡಿಸಿದ್ದಾರೆ ಎಂದು ಇಂಡಿಯನ್ ಹೈಕಮೀಷನ್ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು