ವಿದೇಶ

ಗರ್ಭಿಣಿಯರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು : ಸಿಡಿಸಿ

ವಾಷಿಂಗ್ಟನ್ :  ಅಮೆರಿಕದಲ್ಲಿ ಹರಡುತ್ತಿರುವ  ಡೆಲ್ಟಾ ಸೋಂಕು ತಡೆಗಟ್ಟಲು  ಗರ್ಭಿಣಿಯರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ದಿ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಬೋರ್ಡ್ (ಸಿಡಿಸಿ) ಸೂಚನೆ ನೀಡಿದೆ.

ಅಮೆರಿಕದಲ್ಲಿ ಡೆಲ್ಟಾ ಸೋಂಕು ಉಲ್ಬಣವಾಗುತ್ತಿದ್ದು, ಲಸಿಕೆಯ ಪಡೆಯದ ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರಿಗೆ ಸೋಂಕು ತಗುಲುವ ಪ್ರಮಾಣ ಹೆಚ್ಚಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗಾಗಿ ಡೆಲ್ಟಾ ಪ್ಲಸ್ ಸೋಂಕಿನ ವಿರುದ್ಧ ಹೋರಾಡಲು ಎಲ್ಲಾ ಗರ್ಭಿಣಿಯರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಹೇಳಲಾಗಿದೆ.

ಗರ್ಭಿಣಿಯರು ಕೊರೊನಾ ಸೋಂಕಿಗೆ ತುತ್ತಾದರೆ ಹೆಚ್ಚಿನ ಅಪಾಯಗಳನ್ನು ಹೊಂದಿರುತ್ತಾರೆ ಬಹುಶಃ ಗರ್ಭಪಾತ ಆಗುವ ಸಾಧ್ಯತೆಯೂ ಹೆಚ್ಚಿರುತ್ತದೆ.

ಸಿಡಿಸಿ ಮಾಹಿತಿ ಪ್ರಕಾರ ಕೇವಲ ಶೇ.23ರಷ್ಟು ಗರ್ಭಿಣಿಯರು ಮಾತ್ರ ಲಸಿಕೆ ಪಡೆದಿದ್ದಾರೆ. ”ಲಸಿಕೆಗಳು ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿದೆ, ಡೆಲ್ಟಾ ವೇಗವಾಗಿ ಹರಡುತ್ತಿರುವ ಕಾರಣ ಗರ್ಭಿಣಿಯರಿಗೂ ಸೋಂಕು ತಗುಲಬಹುದು” ಎಂದು ಸಿಡಿಸಿ ನಿರ್ದೇಶಕ ಡಾ. ರೋಚಲ್ಲೆ ತಿಳಿಸಿದ್ದಾರೆ.

”ಗರ್ಭಿಣಿಯರು ಲಸಿಕೆ ಪಡೆದುಕೊಂಡಿದ್ದೇ ಆದರೆ, ಸೋಂಕಿನ ತಗುಲಿದರೂ ಅದರ ತೀವ್ರತೆ ಕಡಿಮೆಯಿರುತ್ತದೆ. ಅಲ್ಲದೆ, ಹೆರಿಗೆ ಮತ್ತು ಅಕಾಲಿಕ ಹೆರಿಗೆಗಳ ಅಪಾಯ ಕಡಿಮೆ ಇರುತ್ತದೆ. ಸೋಂಕು ಹರಡುವ ಪ್ರಮಾಣ ಕೂಡ ಕಡಿಮೆ ಇರುತ್ತದೆ” ಎಂದು ವೈದ್ಯರು ಹೇಳಿದ್ದಾರೆ. ಇತರಂತೆಯೇ ಎಲ್ಲಾ ಗರ್ಭಿಣಿಯರಿಗೂ ಕೋವಿಡ್ ಲಸಿಕೆಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ

Raksha Deshpande

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

2 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

13 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

14 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

36 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

46 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

52 mins ago