Categories: ವಿದೇಶ

ಚಿತ್ತಗಾಂಗ್‌ ಬಂದರು ಸೇತುವೆ ಭಾರತ-ಬಾಂಗ್ಲಾ ಸಂಪರ್ಕ ಹೆಚ್ಚಿಸಬಹುದು: ಬಾಂಗ್ಲಾ ಪ್ರಧಾನಿ

ಚಿತ್ತಗಾಂಗ್‌ ಬಂದರು ಪ್ರವೇಶಿಸುವ ಮೂಲಕ ಭಾರತ ಹಾಗೂ ಬಾಂಗ್ಲಾ ನಡುವಿನ ಸಂಪರ್ಕವನ್ನು ಹೆಚ್ಚಿಸಬಹುದು ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತದ ಈಶಾನ್ಯ ರಾಜ್ಯಗಳು ಚಿತ್ತಗಾಂಗ್ ಬಂದರನ್ನು ಪ್ರವೇಶಿಸಲು ಅನುಮತಿ ನೀಡಿದ್ದಾರೆ. ಎರಡೂ ದೇಶಗಳ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಭಾರತ ಬಂದರನ್ನು ಪ್ರವೇಶಿಸಬಹುದು ಎಂದು ಪ್ರಧಾನಿ ಹಸೀನಾ ಹೇಳಿದ್ದಾರೆ.

ಚಿತ್ತಗಾಂಗ್ ಅಥವಾ ಛಟೋಗ್ರಾಮ್ ಬಂದರು ಬಾಂಗ್ಲಾದೇಶದ ಪ್ರಮುಖ ಬಂದರುಗಳಲ್ಲಿ ಒಂದಾಗಿದ್ದು, ಇದು ಚಿತ್ತಗಾಂಗ್ ಬೆಟ್ಟಗಳ ಪ್ರದೇಶದಲ್ಲಿದೆ. ಸಮುದ್ರ ಬಂದರಿನ ಸಾಮೀಪ್ಯದಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಆರ್ಥಿಕ ಚಟುವಟಿಕೆಯನ್ನು ಗಣನೀಯವಾಗಿ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಜಾಗತಿಕ ಹಡಗು ಮಾರ್ಗಗಳಿಗೆ ನಿಕಟ ಪ್ರವೇಶವನ್ನು ಒದಗಿಸುತ್ತದೆ.

2010 ರ ಆರಂಭದಲ್ಲಿ, ಭಾರತ ಮತ್ತು ಬಾಂಗ್ಲಾದೇಶವು ಚಿತ್ತಗಾಂಗ್ ಮತ್ತು ಮೊಂಗ್ಲಾ ಬಂದರುಗಳನ್ನು ಭಾರತದಿಂದ ಸರಕು ಸಾಗಣೆಗೆ ಬಳಸಲು ಅನುಮತಿಸುವ ತಿಳುವಳಿಕೆ ಒಪ್ಪಂದಕ್ಕೆ (MOU) ಸಹಿ ಹಾಕಿದ್ದವು.

ಮೂರು ದಿನಗಳ ಬಾಂಗ್ಲಾ ಪ್ರವಾದಲ್ಲಿದ್ದ ಜೈ ಶಂಕರ್‌ ಅವರು ಅಲ್ಲಿನ ಪ್ರಧಾನಿಯವರನ್ನು ಭೇಟಿ ಮಾಡಿ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಜೊತೆಗೆ ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನವನ್ನು ಪ್ರಧಾನಿ ಹಸೀನಾ ಅವರಿಗೆ ರವಾನಿಸಿದ್ದಾರೆ. ಹಾಗೂ ಈದ್ ನಂತರ ಎರಡು ದೇಶಗಳ ನಡುವೆ ಗಡಿಯಾಚೆಗಿನ ಬಸ್ ಮತ್ತು ರೈಲ್ವೆ ಸೇವೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದರು.

Sneha Gowda

Recent Posts

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

1 min ago

ಕ್ರೂಸರ್ ವಾಹನ ಪಲ್ಟಿ: 3 ಮಹಿಳೆಯರು ಮೃತ್ಯು

ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಸಾಂಗೋಲಾ- ಜತ್ತ ಮಾರ್ಗದ ಬಳಿ…

3 mins ago

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

16 mins ago

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…

23 mins ago

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಗಾಡ್ ಪ್ರಾಮಿಸ್’ ಚಿತ್ರದ ಮುಹೂರ್ತ

ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…

46 mins ago

ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

57 mins ago