ಚೀನಾ : ಇಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಚೀನಾ ಗಂಡಾಂತರ ತರುತ್ತಿರುವ ಹಿನ್ನೆಲೆಯಲ್ಲಿ ಭಾರತವು ಖಡಕ್ ತಿರುಗೇಟು ನೀಡಿದ್ದು, ಚೀನಿಯರ ಪ್ರವಾಸಿ ವೀಸಾಕ್ಕೆ ಕತ್ತರಿ ಹಾಕಿದೆ. ಏಪ್ರಿಲ್ 20ರಂದು ಹೊರಡಿಸಲಾಗಿರುವ ಸುತ್ತೋಲೆಯಲ್ಲಿ ಚೀನಾದ ಪ್ರವಾಸಿಗರಿಗೆ ನೀಡಲಾಗಿರುವ ಪ್ರವಾಸಿ ವೀಸಾಗಳು ಅಸಿಂಧು ಎಂದು ತಿಳಿಸಲಾಗಿದೆ.
ಚೀನಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ಮೂಲದ 22 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕೊರೊನಾ ಸೋಂಕಿನ ಹಿನ್ನಲೆಯಲ್ಲಿ 2020ರಲ್ಲಿ ಭಾರತಕ್ಕೆ ಹಿಂದಿರುಗಿದ್ದರು. ಆದರೆ ಆ ಬಳಿಕ ಭೌತಿಕ ತರಗತಿಗಳಿಗೆ ಹಾಜರಾಗಲು ಚೀನಾ ಸರ್ಕಾರ ವೀಸಾ ನೀಡಲು ಮೀನಾಮೇಷ ಎಣಿಸುತ್ತಿದೆ. ಇದರಿಂದಾಗಿ ಆ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಭಾರತ ಸರ್ಕಾರ ಈ ಕುರಿತು ಹಲವು ಬಾರಿ ಚೀನಾ ಜೊತೆ ಮಾತುಕತೆ ನಡೆಸಿದ್ದರೂ ಸಮಸ್ಯೆ ಬಗೆಹರಿದಿಲ್ಲ.
ಈ ಹಿನ್ನೆಲೆಯಲ್ಲಿ ತಿರುಗೇಟು ನೀಡಲು ಮುಂದಾದ ಭಾರತ, ಚೀನಾ ನಾಗರಿಕರಿಗೆ ನೀಡಲಾಗಿದ್ದ ಪ್ರವಾಸಿ ವೀಸಾಗಳನ್ನು ಅಮಾನತು ಮಾಡಿದೆ. ಈಗಾಗಲೇ ಈ ಕುರಿತು ವಿಮಾನಯಾನ ಸಂಸ್ಥೆಗಳ ಸಂಘ ಐಎಟಿಎ ತನ್ನೆಲ್ಲ ಸದಸ್ಯರಿಗೆ ಮಾಹಿತಿಯನ್ನು ರವಾನಿಸಿದೆ. ಹತ್ತು ವರ್ಷ ಅವಧಿಯ ಪ್ರವಾಸಿ ವೀಸಾ ಇನ್ನು ಮುಂದೆ ಸಿಂಧುವಲ್ಲ ಎಂದು ತಿಳಿಸಲಾಗಿದೆ.
ಆನ್ಲೈನ್ ಪಾರ್ಟ್ಟೈಮ್ ಕೆಲಸ ಹಾಗೂ ಆನ್ಲೈನ್ ಟ್ರೇಡಿಂಗ್ ಮೇಸೆಜ್ ನ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…
ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.
ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.
ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.
ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.
ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.