ನ್ಯೂಯಾರ್ಕ್: ನಗರದ ಬಫಲೋ ಸೂಪರ್ ಮಾರ್ಕೆಟ್ನಲ್ಲಿ ಸುರಕ್ಷಾ ಕವಚ ಹಾಗೂ ಹೆಲ್ಮೆಟ್ ಧರಿಸಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿದ್ದಾನೆ.
ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತರಲ್ಲಿ 11 ಮಂದಿ ಆಫ್ರಿಕನ್ ಅಮೆರಿಕನ್ನರಿದ್ದು ಪೇಟನ್ ಜೆಂಡ್ರಾನ್(18) ಕೃತ್ಯವೆಸಗಿದ ಬಂದೂಕುಧಾರಿ. ದುಷ್ಕರ್ಮಿ ಕೃತ್ಯವನ್ನು ಕ್ಯಾಮರಾದಲ್ಲಿ ಲೈವ್ ಸ್ಟ್ರೀಮ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಮೊದಲು ಪಾರ್ಕಿಂಗ್ ಸ್ಥಳದಲ್ಲಿದ್ದ ನಾಲ್ಕು ಜನರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ, ಬಳಿಕ ಸೂಪರ್ ಮಾರ್ಕೆಟ್ ಒಳ ನುಗ್ಗಿ ದಾಳಿ ಮಾಡಿದ್ದಾನೆ. ಮೃತಪಟ್ಟವರಲ್ಲಿ ಒಬ್ಬರು ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದು, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರು (ನಿವೃತ್ತ ಪೊಲೀಸ್ ಅಧಿಕಾರಿ) ಮೃತಪಡುವ ಮುನ್ನ ದಾಳಿಕೋರನ ಮೇಲೆ ಪ್ರತಿದಾಳಿ ನಡೆಸಿದ್ದರು ಎಂದು ಬಫಲೊ ಪೊಲೀಸ್ ಕಮಿಷನರ್ ಜೋಸೆಫ್ ಗ್ರಾಮಗ್ಲಿಯಾ ವಿವರಿಸಿದ್ದಾರೆ.
ಪೊಲೀಸರು ಸಾಮೂಹಿಕ ಗುಂಡಿನ ದಾಳಿಯನ್ನು “ದ್ವೇಷದ ಅಪರಾಧ ಮತ್ತು ಜನಾಂಗೀಯ ಪ್ರೇರಿತ ಹಿಂಸಾತ್ಮಕ ಉಗ್ರ ಕೃತ್ಯ” ಎಂದು ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಸಂಪೂರ್ಣ, ತ್ವರಿತ ತನಿಖೆ ನಡೆಸಲು ಮತ್ತು ಅಮಾಯಕರ ಸಾವಿಗೆ ನ್ಯಾಯ ಒದಗಿಸಲು ನ್ಯಾಯಾಂಗ ಬದ್ಧವಾಗಿದೆ” ಎಂದು ಯುಎಸ್ ಅಟಾರ್ನಿ ಜನರಲ್ ಮೆರಿಕ್ ಗಾರ್ಲ್ಯಾಂಡ್ ಹೇಳಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…