Categories: ವಿದೇಶ

ಜಾಗತಿಕ ಸಮುದಾಯಕ್ಕೆ ತಾಲೀಬಾನ್ ಬೆದರಿಕೆ

ಕಾಬೂಲ್: “ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವೂ ಎದುರಾಗಬಾರದೆಂದರೆ ತಮ್ಮ ನೇತೃತ್ವದ ಸರ್ಕಾರವನ್ನು ಮಾನ್ಯ ಮಾಡಿ ಅಂಗೀಕರಿಸಿ” ಎಂದು ಜಾಗತಿಕ ಸಮುದಾಯಕ್ಕೆ ತಾಲೀಬಾನ್ ಎಚ್ಚರಿಕೆ ನೀಡಿದೆ.

ಅಫ್ಘಾನಿಸ್ತಾನ ತಾಲೀಬಾನ್ ಕೈವಶವಾಗಿ ಎರಡು ತಿಂಗಳುಗಳು ಕಳೆದಿವೆ. ಚೀನಾ, ಪಾಕಿಸ್ತಾನ ಹೊರತುಪಡಿಸಿ ಬೇರೆ ಯಾವುದೇ ರಾಷ್ಟ್ರವೂ ತಾಲೀಬಾನ್ ಸರ್ಕಾರವನ್ನು ಮಾನ್ಯ ಮಾಡಿ ಅಂಗೀಕರಿಸುವ ಉತ್ಸಾಹವನ್ನಾಗಲೀ ತಾಲೀಬಾನ್ ಜೊತೆಗೆ ಮಾತುಕತೆ ನಡೆಸುವುದಕ್ಕೆ ಮುಂದಾಗುವ ಸೂಚನೆಯನ್ನಾಗಲೀ ನೀಡಿಲ್ಲ.

ತಾಲೀಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ತಮ್ಮನ್ನು ಜವಾಬ್ದಾರಿಯುತ ವ್ಯವಸ್ಥೆಯನ್ನಾಗಿ ಗುರುತಿಸಬೇಕಾಗಿದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸಮುದಾಯ ಈಗ ಅಫ್ಘಾನಿಸ್ತಾನದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿ ಹಾಗೂ ಬಿಕ್ಕಟ್ಟಿನ ವಿಷಯಗಳತ್ತ ಗಮನ ಕೇಂದ್ರೀಕರಿಸುತ್ತಿದ್ದು, ಕಾದು ನೋಡುತ್ತಿವೆ.

ಈ ನಡುವೆ ತಾಲೀಬಾನ್ ಎಚ್ಚರಿಕೆಯ ಸಂದೇಶವನ್ನು ನೀಡಿದ್ದು, ಅಂತಾರಾಷ್ಟ್ರೀಯ ಸಮುದಾಯ ತಮ್ಮನ್ನು ಮಾನ್ಯ ಮಾಡುವವರೆಗೂ ಅಫ್ಘಾನಿಸ್ತಾನದಿಂದ ಬೇರೆ ಯಾವುದೇ ರಾಷ್ಟ್ರಗಳಿಗೆ ಬರುವ ಬೆದರಿಕೆಯ ವಿಷಯದ ಬಗ್ಗೆ ಯಾವುದೇ ಜವಾಬ್ದಾರಿಯನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಎಚ್ಚರಿಸಿದೆ.

ನಮ್ಮನ್ನು ಅಂಗೀಕರಿಸದ ಕಾರಣಕ್ಕಾಗಿ ನಾವು ಅಮೆರಿಕ ವಿರುದ್ಧ ಹೋರಾಡಿದೆವು, ತಾಲೀಬಾನ್ ನ್ನು ಮಾನ್ಯ ಮಾಡದೇ ಇದ್ದಲ್ಲಿ ಅಫ್ಘಾನಿಸ್ತಾನ, ಪ್ರಾಂತೀಯ, ಜಾಗತಿಕ ಮಟ್ಟದಲ್ಲಿ ಸಮಸ್ಯೆ ಹೆಚ್ಚಳವಾಗುತ್ತದೆ ಎಂದು ತಾಲೀಬಾನ್ ವಕ್ತಾರರು ಹೇಳ್ದಿದಾರೆ.

Swathi MG

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

19 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

40 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

46 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago