News Karnataka Kannada
Saturday, April 27 2024
ವಿದೇಶ

ಢಾಕಾ ಹತ್ಯೆ ಪ್ರಕರಣ: 20 ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ

Murder Attempt
Photo Credit :

ಢಾಕಾ : ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಟೀಕಿಸಿ ಪೋಸ್ಟ್‌ ಮಾಡಿದ್ದ ವಿದ್ಯಾರ್ಥಿಯೊಬ್ಬನನ್ನು ಕಾಲೇಜು ಆವರಣದಲ್ಲೇ ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ 20 ವಿದ್ಯಾರ್ಥಿಗಳಿಗೆ ಢಾಕಾ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಮೂಲಕ ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿರುವುದಾಗಿ ಕೋರ್ಟ್‌ ಹೇಳಿದೆ.

ಆರೋಪಿಗಳೆಲ್ಲರೂ ದೋಷಿಗಳೆಂದು ಸಾಬೀತಾಗಿದ್ದು, 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಮೂರ್ತಿ ಅಬು ಜಾಫರ್‌ ಮೊಹಮ್ಮದ್‌ ಕಮ್ರುಜ್ಜಾಮನ್‌ ಘೋಷಿಸಿದ್ದಾರೆ. ಒಟ್ಟು 25 ತಪ್ಪಿತಸ್ಥರ ಪೈಕಿ ಮೂವರು ಕೃತ್ಯ ನಡೆದಂದಿನಿಂದ ತಲೆಮರೆಸಿಕೊಂಡಿದ್ದು, ಉಳಿದ ಎಲ್ಲರೂ ಜೈಲಿನಲ್ಲಿದ್ದಾರೆ.

2019ರ ಅಕ್ಟೋಬರ್‌ 6ರಂದು, ಬಾಂಗ್ಲಾದೇಶದ ಇಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿ ಅಬ್ರಾರ್‌ ಫಹಾದ್‌ ಎಂಬುವವರನ್ನು ಕಾಲೇಜಿನ ಆವರಣದಲ್ಲಿ ಉದ್ರಿಕ್ತ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಶಿಕ್ಷೆಗೊಳಗಾಗಿರುವ ವಿದ್ಯಾರ್ಥಿಗಳು ಕ್ರಿಕೆಟ್‌ ಬ್ಯಾಟ್‌ ಮತ್ತಿತರ ವಸ್ತುಗಳಿಂದ ಸುಮಾರು 6 ಗಂಟೆಗಳ ಕಾಲ ಫಹಾದ್‌ ಮೇಲೆ ಹಲ್ಲೆ ನಡೆಸಿದ್ದರು.

ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಬಾಂಗ್ಲಾದೇಶ್‌ ಛಾತ್ರ ಲೀಗ್‌ (ಬಿಸಿಎಲ್‌)ನ ಕಾರ್ಯಕರ್ತರು ಹಲ್ಲೆಯಲ್ಲಿ ಭಾಗಿಯಾಗಿದ್ದರು. 21 ವರ್ಷದ ವಿದ್ಯಾರ್ಥಿಯ ಹತ್ಯೆಗೆ ಸಂಬಂಧಿಸಿ ಬಾಂಗ್ಲಾದೇಶದೆಲ್ಲೆಡೆ ಪ್ರತಿಭಟನೆ ನಡೆದಿತ್ತು. ಕೃತ್ಯದ ಸಿಸಿಟಿವಿ ಫೂಟೇಜ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಘಟನೆ ನಡೆದ ಬಳಿಕ ಬಿಸಿಎಲ್‌ ವಿದ್ಯಾರ್ಥಿ ಸಂಘಟನೆಯಿಂದ ಎಲ್ಲ ಆರೋಪಿಗಳನ್ನು ಅಮಾನತುಗೊಳಿಸಲಾಗಿದೆ. ಪ್ರಧಾನಿ ಶೇಖ್ ಹಸೀನಾ ಅವರೇ ಆರೋಪಿಗಳನ್ನು ಸಂಘಟನೆಯಿಂದ ಹೊರಹಾಕುವಂತೆ ಸೂಚಿಸಿದ್ದರು. ಕಾಲೇಜಿನಿಂದಲೂ ಅವರನ್ನು ಹೊರ ಹಾಕಲಾಗಿದೆ.

ಭಾರತ ಮತ್ತು ಬಾಂಗ್ಲಾ ನಡುವಣ ನದಿ ನೀರು ಹಂಚಿಕೆ ವಿಚಾರವಾಗಿ ಆಡಳಿತರೂಢ ಅವಾಮಿ ಲೀಗ್‌ ಸರ್ಕಾರವನ್ನು ಫಹಾದ್‌ ಫೇಸ್‌ಬುಕ್‌ನಲ್ಲಿ ಟೀಕಿಸಿದ್ದಕ್ಕೆ ವಿರೋಧಿ ಗುಂಪು ಸಿಟ್ಟಾಗಿತ್ತು ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು