ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಾಗಿನಿಂದ ಕಳೆದ ಮೂರು ತಿಂಗಳಲ್ಲಿ ಶೇ. 50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಮುಚ್ಚಲ್ಪಟ್ಟಿರುವುದಾಗಿ ಖಾಸಗಿ ಶಿಕ್ಷಣ ಕೇಂದ್ರಗಳ ಯೂನಿಯನ್ ಹೇಳಿಕೆ ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಯೂನಿಯನ್ ಪ್ರಕಾರ, ಕುಟುಂಬಗಳ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಈ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಚ್ಚಲು ಪ್ರಮುಖ ಕಾರಣವಾಗಿದೆ. ಅಫ್ಘಾನಿಸ್ತಾನದಲ್ಲಿ ಆಡಳಿತ ಬದಲಾವಣೆ ನಂತರ ಶೇಕಡ 40 ರಿಂದ 50 ರಷ್ಟು ಶಿಕ್ಷಣ ಸಂಸ್ಥೆಗಳು ತಮ್ಮ ಚಟುವಟಿಕೆಗಳನ್ನು ನಿಲ್ಲಿಸಿವೆ. ಇದರಿಂದಾಗಿ ಶಿಕ್ಷಣ ಕೇಂದ್ರಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿರುವುದಾಗಿ ಯೂನಿಯನ್ ಮುಖ್ಯಸ್ಥ ಸಂಜರ್ ಖಲೀದ್ ಹೇಳಿದ್ದಾರೆ.
ಶಿಕ್ಷಣವನ್ನು ಮುಂದುವರೆಸಲು ತಮ್ಮ ಆತ್ಮಸ್ಥೈರ್ಯದ ಮೇಲೆ ಹೆಚ್ಚಿನ ಸಮಯ ಪರಿಣಾಮ ಬೀರಲಿದೆ ಎಂದು ಕೆಲ ವಿದ್ಯಾರ್ಥಿಗಳು ಹೇಳಿದ್ದಾರೆ. ಶಿಕ್ಷಣದಿಂದ ದೇಶವನ್ನು ರಕ್ಷಿಸುವ ವ್ಯಕ್ತಿಯಾಗಬಹುದು ಎಂಬ ವಿಶ್ವಾಸ ಈಗಲೂ ಇದೆ ಎಂದು ವಿದ್ಯಾರ್ಥಿಯೊಬ್ಬ ಟೊಲೊ ನ್ಯೂಸ್ ಗೆ ಹೇಳಿದ್ದಾರೆ. ಮುಂದಿನ ವರ್ಷ ಶಾಲೆಗೆ ಹೋಗಬೇಕೆ ಅಥವಾ ಬೇಡವೇ ಎಂಬುದು ಇನ್ನೂ ದೃಢವಾಗಿಲ್ಲ ಎಂದು ಮತ್ತೋರ್ವ ವಿದ್ಯಾರ್ಥಿ ನಾಜಿಯಾ ಸರ್ವಾರಿ ಹೇಳಿದ್ದಾರೆ.
ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…
ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…