ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಎಲ್ಲಾ ಸಮುದಾಯಗಳನ್ನು ಒಳಗೊಂಡ ಸಮ್ಮಿಶ್ರ ಸರ್ಕಾರ ಇರಬೇಕು ಎಂಬುದೇ ತಮ್ಮ ಆಶಯವಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಇದಕ್ಕಾಗಿ ತಾಲಿಬಾನಿಗಳ ಜೊತೆ ಮಾತುಕತೆ ಆರಂಭಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ತಜಿಕಿಗಳು, ಹಜಾರಗಳು, ಉಜ್ಬೆಕ್ಗಳಿಗೆ ಸರ್ಕಾರದಲ್ಲಿ ಪಾಲು ನೀಡಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಈ ಸಂಬಂಧ ಅವರು ಶನಿವಾರ ಟ್ವೀಟ್ ಮಾಡಿದ್ದು, ಮಾತುಕತೆಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಜನರ ಹಕ್ಕುಗಳನ್ನು ಗೌರವಿಸುವಂತಹ ಕ್ರಮಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ ಎಂದು ತಾಲಿಬಾನಿಗಳಿಗೆ ಇಮ್ರಾನ್ ಖಾನ್ ಸಲಹೆ ನೀಡಿದ್ದಾರೆ. ಅಫ್ಘಾನ್ ನೆಲ ಮತ್ತೊಮ್ಮೆ ಭಯೋತ್ಪಾದಕರ ಸ್ವರ್ಗವಾಗಿ ಪರಿವರ್ತನೆಗೊಳ್ಳಬಾರದು ಎಂದು ಅವರು ಸೂಚನೆ ನೀಡಿದ್ದಾರೆ.
ಅಫ್ಘಾನಿಸ್ತಾನದ ಹೊಸ ಸರ್ಕಾರದಲ್ಲಿ ಎಲ್ಲಾ ಸಮುದಾಯಗಳಿಗೆ ಪ್ರಾತಿನಿತ್ಯ ಲಭಿಸುವುದನ್ನು ಖಚಿತಪಡಿಸಲು ಪಾಕಿಸ್ತಾನ ಮುಂದಾಗಬೇಕೆಂದು ಶಾಂಘೈ ಸಹಕಾರ ಸಂಸ್ಥೆ (SCO) ಸದಸ್ಯ ರಾಷ್ಟ್ರಗಳು ಕರೆ ನೀಡಿದ ಮರುದಿನವೇ ಇಮ್ರಾನ್ ಖಾನ್ ಈ ಹೇಳಿಕೆ ನೀಡಿದ್ದಾರೆ. ತಾಲಿಬಾನ್ ಸರ್ಕಾರದ ಮಂತ್ರಿ ಮಂಡಲದ 33 ಮಂದಿಯಲ್ಲಿ ತಜಿಕಿಗಳು, ಮಹಿಳೆಯರಿಗೆ ಯಾವುದೇ ಪ್ರಾತಿನಿಧ್ಯವಿಲ್ಲದಿರುವುದು ಗಮನಾರ್ಹವಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…