ಪಾಕಿಸ್ತಾನದ ರಾಜಕೀಯ ಬಿಕ್ಕಟ್ಟುಗಳು ದಿನಕೊಂದು ತಿರುವು ಪಡೆಯುತ್ತಿವೆ. ಒಂದೆಡೆ ಪ್ರಧಾನಿ ಇಮ್ರಾನ್ ಖಾನ್ ಪಾಕ್ ಸಂಸತ್ತಿನಲ್ಲಿ ವಿಶ್ವಾಸಮತ ಸಾಬೀತು ಪಡಿಸಲು ಹೆಣಗಾಡುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಪ್ರಧಾನಿ ಮೇಲೆ ದಾಳಿ ನಡೆದಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಮೇಲೆ ಶನಿವಾರ ಲಂಡನ್ನಲ್ಲಿ ದಾಳಿಯಾಗಿದೆ.
ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಕಾರ್ಯಕರ್ತನಿಂದ ನವಾಜ್ ಷರೀಫ್ ಮೇಲೆ ದಾಳಿ ನಡೆದಿದೆ ಎಂದು ಫ್ಯಾಕ್ಟ್ ಫೋಕಸ್ ನ್ಯೂಸ್ ವರದಿಗಾರ ಅಹ್ಮದ್ ನೂರಾನಿ ಟ್ವಿಟ್ ಮಾಡಿದ್ದಾರೆ. ವರದಿಯ ಪ್ರಕಾರ, ದಾಳಿಯಲ್ಲಿ ನವಾಜ್ ಷರೀಫ್ ಸಿಬ್ಬಂದಿ ಗಾಯಗೊಂಡಿದ್ದಾನೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯವು ಯಶಸ್ವಿಯಾದರೆ, ನವಾಜ್ ಷರೀಫ್ ಅವರ ಸಹೋದರ ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ನ ಶೆಹಬಾಜ್ ಷರೀಫ್ ಅವರು ಪ್ರಧಾನಿ ಹುದ್ದೆಗೆ ಏರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ನವಾಜ್ ಷರೀಫ್ ಪುತ್ರಿ ಮರ್ಯಮ್, ಹಿಂಸಾಚಾರ ನಡೆಸುತ್ತಿರುವ ಆಡಳಿತ ಪಕ್ಷದವರನ್ನು ಜೈಲಿಗೆ ಹಾಕಬೇಕು. ಹಿಂಸೆಗೆ ಪ್ರಚೋದನೆ ಮತ್ತು ದೇಶದ್ರೋಹ ನಡೆಸಿರುವ ಇಮ್ರಾನ್ ಖಾನ್ ಅವರ ಮೇಲೆ ಪ್ರಕರಣ ದಾಖಲಾಗಬೇಕು ಎಂದು ಆಗ್ರಹಿಸಿದ್ದಾರೆ.
ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…