Categories: ವಿದೇಶ

ಪಾಕ್ ಮೇಲೆ ಅಫ್ಘಾನಿಸ್ತಾನ್ ಉಗ್ರರ ದಾಳಿ

ಇಸ್ಲಾಮಾಬಾದ್: ಅಫ್ಘಾನಿಸ್ತಾನದ ಉಗ್ರರು ಕಳೆದ ರಾತ್ರಿ ಗಡಿಯುದ್ದಕ್ಕೂ ಪಾಕಿಸ್ತಾನದ ಸೇನಾ ಪೋಸ್ಟ್ ಗಳ ಮೇಲೆ ಭಾರೀ ಶೆಲ್ ದಾಳಿ ನಡೆಸಿದ್ದು ಮೂವರು ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಾರೆ ಎಂದು ಸೇನೆಯು ಶನಿವಾರ ತಿಳಿಸಿದೆ.

ಪಾಕಿಸ್ತಾನದ ಉತ್ತರ ವಜೀರಿಸ್ತಾನ್ ಪ್ರದೇಶದಲ್ಲಿನ ಸೇನಾ ಪೋಸ್ಟ್‌ನತ್ತ ಭಯೋತ್ಪಾದಕರು ಗುಂಡಿನ ದಾಳಿ ನಡೆಸುವುದರೊಂದಿಗೆ ಎನ್‌ಕೌಂಟರ್ ಆರಂಭವಾಯಿತು.

ಇತ್ತೀಚಿನ ದಿನಗಳಲ್ಲಿ ಅಫ್ಘಾನಿಸ್ತಾನದಲ್ಲಿ ಹಲವು ಸ್ಫೋಟಗಳು ನಡೆದಿರುವ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಗುರುವಾರ ಅಫ್ಘಾನಿಸ್ತಾನದಲ್ಲಿ ನಡೆದ ಹಲವಾರು ದಾಳಿಗಳ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್-ಖೊರಾಸನ್ ವಹಿಸಿಕೊಂಡಿದೆ. ಈ ದಾಳಿಗಳಲ್ಲಿ ಹೆಚ್ಚಿನವು ದೇಶದ ಅಲ್ಪಸಂಖ್ಯಾತ ಶಿಯಾ ಸಮುದಾಯವನ್ನು ಗುರಿಯಾಗಿರಿಸಿಕೊಂಡಿವೆ.

ಭಯೋತ್ಪಾದಕರು ಅಫ್ಘಾನಿಸ್ತಾನದ ಮಣ್ಣನ್ನು ತನ್ನ ವಿರುದ್ಧದ ಚಟುವಟಿಕೆಗಳಿಗೆ ಬಳಸುವುದನ್ನು ಪಾಕಿಸ್ತಾನ ಬಲವಾಗಿ ಖಂಡಿಸುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಚಟುವಟಿಕೆಗಳು ನಡೆಯಲು ಆಫ್ಘನ್ ಸರ್ಕಾರವು ಅನುಮತಿಸುವುದಿಲ್ಲ ಎಂದು ಆಶಿಸುತ್ತಿದೆ ಎಂದು ಪಾಕಿಸ್ತಾನಿ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಮಧ್ಯೆ , ಗುರುವಾರ ಐಎಸ್ ಕೆ ನಿಂದ ದಾಳಿಗೊಳಗಾದ ಅಬ್ದುಲ್ ರಹೀಮ್ ಶಾಹೀದ್ ಶಾಲೆಯನ್ನು ಶಿಕ್ಷಣಕ್ಕಾಗಿ ಪುನಃ ತೆರೆಯಲಾಗಿದೆ. ದಾಳಿಯಲ್ಲಿ ಏಳು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ತರಗತಿಗಳ ಪ್ರಾರಂಭದಲ್ಲಿ ಶಾಲೆಯ ಪ್ರಾಂಶುಪಾಲರು ಪ್ರತಿ ವಿದ್ಯಾರ್ಥಿಗೆ ಪೆನ್ನು ಮತ್ತು ಹೂವು ನೀಡಿದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago