ವಿದೇಶ

ಪ್ರಧಾನಿ ಹುದ್ದೆಗೆ ನಾನು ರಾಜೀನಾಮೆ ನೀಡಲ್ಲ: ಪಾಕ್​ ಪ್ರಧಾನಿ ಇಮ್ರಾನ್ ಖಾನ್

ದೇಶವನ್ನುದ್ದೇಶಿಸಿ ಪಾಕ್​ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದ್ದಾರೆ.  ಅಧಿವೇಶನದಲ್ಲಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಇಮ್ರಾನ್ ಖಾನ್ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಪ್ರಧಾನಿ ಹುದ್ದೆಗೆ ನಾನು ರಾಜೀನಾಮೆ ನೀಡಲ್ಲ, ಕೊನೆಯ ಕ್ಷಣದ ವರೆಗೂ ಹೋರಾಡುತ್ತೇನೆ. ಅವಿಶ್ವಾಸ ನಿರ್ಣಯವನ್ನು ಎದುರಿಸುತ್ತೇನೆ ಎಂದು ಹೇಳಿದ್ದಾರೆ.

ನನ್ನ ಮನದ ಮಾತು ಪಾಕಿಸ್ತಾನದ ಜನತೆ ಮುಂದಿಡುವ ಉದ್ದೇಶದಿಂದ ಭಾಷಣ ಮಾಡುತ್ತಿದ್ದೇನೆ. . ಇಲ್ಲಿನ ಜನರ ಸೇವೆ ಮಾಡುವ ಕಾರಣಕ್ಕಾಗಿ ನಾನು ರಾಜಕಾರಣಕ್ಕೆ ಬಂದಿದ್ದು, ಅನೇಕ ರೀತಿಯ ಏರಿಳಿತ ಕಂಡಿದ್ದೇನೆ ಎಂದರು.

ಇತರೆ ರಾಷ್ಟ್ರಗಳ ಎದುರು ನಾವು ಇರುವೆಗಳಂತೆ ಸಾಗುತ್ತಿದ್ದೇವೆ.ಭಾರತವನ್ನ ನಾವು ಯಾವುದೇ ವಿಷಯದಲ್ಲೂ ವಿರೋಧ ಮಾಡಿಲ್ಲ. 9/11 ದಾಳಿಯಲ್ಲಿ ಪಾಕಿಸ್ತಾನದ ನಾಗರಿಕರು ಭಾಗಿಯಾಗಿರಲಿಲ್ಲ. ಹಳೆ ಜಿಹಾದಿ ಸಂಘಟನೆಗಳು ಪಾಕ್​ ವಿರುದ್ಧ ಒಂದಾಗಿ ಈ ಕೆಲಸ ಮಾಡ್ತಿವೆ. ಕಾಶ್ಮೀರ್​ ವಿಚಾರದಲ್ಲಿ ನನಗೆ ಭಾರತದೊಂದಿಗೆ ಯಾವುದೇ ರೀತಿಯ ಭಿನ್ನಾಬಿಪ್ರಾಯವಿಲ್ಲ. ಆರ್ಟಿಕಲ್ 370 ರದ್ದುಗೊಳಿಸುವ ಮುನ್ನ ಅದರ ವಿರುದ್ಧ ನಾನು ಮಾತನಾಡಿಲ್ಲ ಎಂದಿದ್ದಾರೆ.

ದೇವರು ನನಗೆ ಎಲ್ಲವನ್ನೂ ಕೊಟ್ಟಿರುವುದು ನನ್ನ ಅದೃಷ್ಟ. ನನಗೆ ಏನೂ ಅಗತ್ಯವಿಲ್ಲ . ಪಾಕಿಸ್ತಾನ ನನಗಿಂತಲೂ ಕೇವಲ 5 ವರ್ಷ ಹಳೆಯದು. ಸ್ವಾತಂತ್ರ್ಯದ ನಂತರ ಹುಟ್ಟಿರುವ ದೇಶದ 1ನೇ ತಲೆಮಾರಿನವನು ನಾನು ಎಂದು ಹೇಳಿದರು.

Sneha Gowda

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

18 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

28 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

33 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

40 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

50 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

54 mins ago