News Karnataka Kannada
Tuesday, April 30 2024
ವಿದೇಶ

ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧ: ಝೆಲೆನ್ಸ್ಕಿ

Untitled 204
Photo Credit :

ಉಕ್ರೇನ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಬುಧವಾರ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ.

ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ವೇದಿಕೆಯಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ, ಉಕ್ರೇನ್ ನ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದ ಚೇತರಿಸಿಕೊಳ್ಳುವವರೆಗೂ ಹೋರಾಡಲಿದೆ. ಇದು ಮಾತುಕತೆಯ ಮೊದಲ ಹೆಜ್ಜೆಯಾಗಬಹುದು ಎಂದು ಹೇಳಿದರು.

ಇದಕ್ಕೂ ಮೊದಲು ರಷ್ಯಾದೊಂದಿಗೆ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಸಿ ಯುದ್ಧವನ್ನು ನಿಲ್ಲಿಸುವ ಬಗ್ಗೆ ಚರ್ಚಿಸಲು ಝೆಲೆನ್ಸ್ಕಿ ಮುಂದಾಗಿದ್ದರು. ಆದರೆ ರಷ್ಯಾ ಅಧ್ಯಕ್ಷ ಇದಾವುದಕ್ಕೂ ಬಗ್ಗುವುದಿಲ್ಲ ಎಂಬುದು ಖಾತ್ರಿಯಾಗಿರುವುದರಿಂದ ಉಕ್ರೇನ್ ಅಧ್ಯಕ್ಷ ನೇರ ಮಾತುಕತೆ ನಡೆಸಲು ಸಿದ್ದರಿದ್ದಾರೆ ಎಂದಿದ್ದಾರೆ.

ಕಳೆದ ವಾರ ಝೆಲೆನ್ಸ್ಕಿ ರಾಜತಾಂತ್ರಿಕತೆ ಇಲ್ಲದೇ ಯುದ್ಧವನ್ನು ನಿಲ್ಲಿಸುವುದು ಅಸಾಧ್ಯ ಎಂದು ತಿಳಿಸಿದ್ದರು. ಉಕ್ರೇನ್ನ 2ನೇ ಮುಖ್ಯ ನಗರವಾದ ಖಾರ್ಕೀವ್ ನಲ್ಲಿ ನಮ್ಮ ಪಡೆ ರಷ್ಯಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತಿದೆ. ಆದರೆ ಡಾನ್ಬಾಸ್ ನಗರದಲ್ಲಿ ರಕ್ತಸಿಕ್ತ ಪರಿಸ್ಥಿತಿ ಉಂಟಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು