ವಿದೇಶ

ಮರಿಯುಪೋಲ್ ನಲ್ಲಿ ಕದನ ವಿರಾಮ ಘೋಷಿಸಿದ ರಷ್ಯ

ಮಾಸ್ಕೊ : ತನ್ನ ವಶದಲ್ಲಿರುವ ಉಕ್ರೇನ್ನ ಬಂದರುನಗರ ಮರಿಯುಪೋಲ್ ನ ಅಝೊವ್ಸ್ತಲ್ ಸ್ಟೀಲ್ ಸ್ಥಾವರ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯ ದ ರಕ್ಷಣಾ ಇಲಾಖೆ ಸೋಮವಾರ ಘೋಷಿಸಿದೆ.

ಸ್ಟೀಲ್ ಸ್ಥಾವರದೊಳಗೆ ಇನ್ನೂ ಕೆಲವು ಉಕ್ರೇನ್ ಯೋಧರಿದ್ದು ಪ್ರತಿರೋಧ ಒಡ್ಡುತ್ತಿದ್ದಾರೆ.

ಜತೆಗೆ ಹಲವು ನಾಗರಿಕರೂ ಸ್ಥಾವರದೊಳಗೆ ಆಶ್ರಯ ಪಡೆದಿದ್ದಾರೆ. ಅವರು ಸುರಕ್ಷಿತವಾಗಿ ಹೊರಹೋಗಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಕದನ ವಿರಾಮ ಜಾರಿಯಾಗಿದೆ . ಎಪ್ರಿಲ್ 25ರ ಮಧ್ಯಾಹ್ನ 2 ಗಂಟೆ(ರಷ್ಯ ಸಮಯ)ಯಿಂದ ರಷ್ಯ ಸೇನೆ ಏಕಪಕ್ಷೀಯವಾಗಿ ಕದನ ವಿರಾಮ ಘೋಷಿಸಿದೆ ಎಂದು ರಕ್ಷಣಾ ಇಲಾಖೆಯ ಹೇಳಿಕೆ ತಿಳಿಸಿದೆ.

ಸ್ಟೀಲ್ ಸ್ಥಾವರದಲ್ಲಿ ಇರುವವರು ಸುರಕ್ಷಿತವಾಗಿ ತೆರಳಲು ಅವಕಾಶವಿದೆ ಮತ್ತು ತಮಗೆ ಇಷ್ಟಬಂದ ಕಡೆ ಅವರು ತೆರಳಬಹುದು. ಸುರಕ್ಷಿತವಾಗಿ ಹೊರತೆರಳಲು ಒದಗಿಸಿದ ಅವಕಾಶ ಬಳಸಿಕೊಳ್ಳಲು ಇಚ್ಛಿಸುವವರು ಬಿಳಿ ಧ್ವಜವನ್ನು ಎತ್ತಿಹಿಡಿದು ಸ್ಥಾವರದಿಂದ ಹೊರಬರಬೇಕು ಎಂದು ರಕ್ಷಣಾ ಇಲಾಖೆ ಹೇಳಿದೆ.

ಈ ಸಂದೇಶವನ್ನು ಪ್ರತೀ ಅರ್ಧಗಂಟೆಗೊಮ್ಮೆ ಪ್ರಸಾರ ಮಾಡಲಾಗುತ್ತದೆ ಎಂದು ಸಚಿವಾಲಯ ಹೇಳಿದೆ.

Ashika S

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

16 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

39 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

55 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago