ವಿದೇಶ

ಮೆಕ್ಸಿಕೊ ರೆಸಾರ್ಟ್‌ನಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ

ಲಾಸ್‌ಏಂಜಲಿಸ್‌ : ಮೆಕ್ಸಿಕೊದ ರೆಸಾರ್ಟ್‌ವೊಂದರಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾಲಿಫೋರ್ನಿಯಾದ ಭಾರತೀಯ ಮೂಲದ ಮಹಿಳಾ ಟೆಕ್ಕಿ ಹಾಗೂ ಮತ್ತೊಬ್ಬ ವಿದೇಶಿ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅಂಜಲಿ ರ‍್ಯೋತ್‌(25) ಮೃತಪಟ್ಟ ಭಾರತೀಯ ಮೂಲದ ಟೆಕ್ಕಿ. ಮತ್ತೊಬ್ಬರು ಜರ್ಮನಿಯ ಪ್ರವಾಸಿಗರು. ಕೆರಿಬಿಯನ್ ಕರಾವಳಿಯ ಟುಲುಮ್‌ನಲ್ಲಿರುವ ರೆಸಾರ್ಟ್‌ನ ಲಾ ಮಾಲ್‌ಕ್ಯುರಿಡಾ ರೆಸ್ಟೊರೆಂಟ್‌ನಲ್ಲಿ ಎರಡು ಗುಂಪುಗಳ ನಡುವ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಕ್ಯಾಲಿಫೋರ್ನಿಯಾನ್ಯೂಸ್‌ಟೈಮ್ಸ್‌.ಕಾಮ್ ನ್ಯೂಸ್ ಫೋರ್ಟಲ್‌ ವರದಿ ಮಾಡಿದೆ.

ಅ. 22ರಂದು ಜನ್ಮದಿನ ಆಚರಿಸಿಕೊಳ್ಳಲು ಅಂಜಲಿ ರ‍್ಯೋತ್ ಸೋಮವಾರ ಈ ರೆಸಾರ್ಟ್‌ಗೆ ಬಂದಿದ್ದರು. ಬುಧವಾರ ರಾತ್ರಿ 10.30ರಲ್ಲಿ ಅಂಜಲಿ ಮತ್ತು ಇತರ ನಾಲ್ವರು ವಿದೇಶಿ ಪ್ರವಾಸಿಗರು ರೆಸ್ಟೊರೆಂಟ್‌ನ ಮಹಡಿಯಲ್ಲಿ ಊಟ ಮಾಡುತ್ತಿದ್ದಾಗ, ಅಲ್ಲಿಗೆ ಬಂದ ನಾಲ್ವರು ಶಸ್ತ್ರಧಾರಿ ವ್ಯಕ್ತಿಗಳು, ಇವರ ಟೇಬಲ್‌ ಪಕ್ಕದಲ್ಲೇ ಕುಳಿತಿದ್ದವರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಗುರಿ ತಪ್ಪಿದ ಒಂದು ಗುಂಡು ಪಕ್ಕದಲ್ಲಿದ್ದ ವಿದೇಶಿ ಪ್ರವಾಸಿಗರಿಗೆ ಹೊಡೆದಿದೆ. ಪರಿಣಾಮವಾಗಿ ಅಂಜಲಿ ಮತ್ತು ಜರ್ಮನಿಯ ಪ್ರವಾಸಿಯೊಬ್ಬರು ಮೃತಪಟ್ಟು, ಮೂವರಿಗೆ ಗಾಯಗಳಾಗಿವೆ ಎಂದು ಸ್ಪಾನಿಷ್ ಪತ್ರಿಕೆ ‘ಇಐ ಪೈಸ್‌’ ವರದಿ ಮಾಡಿದೆ.

ರ‍್ಯೋತ್‌ ಅವರ ಇನ್‌ಸ್ಟಾಗ್ರಾಂ ಖಾತೆಯ ಮಾಹಿತಿ ಪಕ್ರಾರ, ಪ್ರವಾಸಿ ಬ್ಲಾಗರ್‌ ಆಗಿರುವ ಅಂಜಲಿ, ಭಾರತದ ಹಿಮಾಚಲ ಪ್ರದೇಶವರು. ಕ್ಯಾಲಿಫೋರ್ನಿಯಾದ ಸ್ಯಾನ್‌ ಜೋಸ್‌ನಲ್ಲಿ ನೆಲೆಸಿದ್ದಾರೆ. ಕಳೆದ ಜುಲೈನಿಂದ ‘ಲಿಂಕ್ಡ್‌ಇನ್‌’ ಕಂಪನಿಯಲ್ಲಿ ಸೀನಿಯರ್ ಸೈಟ್ ರಿಲಿಯಬಲಿಟಿ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು. ಇದಕ್ಕೂ ಮುನ್ನ ಅವರು ಯಾಹೂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ನ್ಯೂಸ್‌ ಪೋರ್ಟ್‌ಲ್ ವರದಿ ಮಾಡಿದೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

7 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago