ವಿದೇಶ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಾಂಗ್ಲಾದೇಶಕ್ಕೆ ಭೇಟಿ

ಢಾಕಾ,ಡಿ.15 : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬಾಂಗ್ಲಾದೇಶಕ್ಕೆ ಮೂರು ದಿನಗಳ ಭೇಟಿ ನಿಮಿತ್ತ ಇಂದು ಇಲ್ಲಿಗೆ ಆಗಮಿಸಿದರು. ಭೇಟಿ ಅವಧಿಯಲ್ಲಿ ಅವರು ತಮ್ಮ ಬಾಂಗ್ಲಾದೇಶ ಸಹವರ್ತಿಯ ಜೊತೆಗೆ ಮಾತುಕತೆ ನಡೆಸಲಿದ್ದಾರೆ. 1971ರಲ್ಲಿ ಪಾಕಿಸ್ತಾನದಿಂದ ಸ್ವತಂತ್ರವಾದ ಬಾಂಗ್ಲಾದೇಶದ 50ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದ ಪಿಡುಗಿನ ಬಳಿಕ ಇದು ರಾಷ್ಟ್ರಪತಿ ಕೋವಿಂದ್ ಅವರ ಮೊದಲ ವಿದೇಶ ಪ್ರವಾಸವಾಗಿದೆ. ಇಲ್ಲಿ ನಡೆಯಲಿರುವ ಬಾಂಗ್ಲಾದೇಶದ ಸ್ವರ್ಣಮಹೋತ್ಸವದಲ್ಲಿ ಕೋವಿಂದ್ ಅವರು ಗಣ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಉಭಯ ದೇಶಗಳ ನಿಕಟ ಸಂಬಂಧಗಳ ಪ್ರತಿಬಿಂಬವಾಗಿ ಭಾರತ ಕೂಡ ಬಾಂಗ್ಲಾದೇಶದ ವಿಮೋಚನೆಗೆ ಕಾರಣವಾದ 1971ರ ಭಾರತ-ಪಾಕಿಸ್ತಾನ ಯುದ್ಧದ 50ನೇ ವರ್ಷಾಚರಣೆ ನಿಮಿತ್ತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮಂಗಳವಾರ ಇಲ್ಲಿ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಂಗ್ಲಾದೇಶದ ವಿದೇಶಾಂಗ ಸಚಿವ ಡಾ.ಎ.ಕೆ.ಅಬ್ದುಲ್ ಮೊಮೆನ್ ಅವರು ರಾಷ್ಟ್ರಪತಿ ಕೋವಿಂದ್ ಅವರ ಭೇಟಿ ಶಿಷ್ಟಾಚಾರದ್ದಾಗಿದೆ ಎಂದು ಕರೆದರಲ್ಲದೆ ಈ ಪ್ರವಾಸದ ಅಂಗವಾಗಿ ದ್ವಿಪಕ್ಷೀಯ ಸಂಬಂಧಗಳ ಎಲ್ಲಾ ಸಮಸ್ಯೆಗಳ ಪರಾಮರ್ಶೆಯೂ ನಡೆಯುವ ನಿರೀಕ್ಷೆ ಇದೆ ಎಂದು ಒತ್ತಿ ಹೇಳಿದ್ದಾರೆ.

ರಾಷ್ಟ್ರಪತಿ ಕೋವಿಂದ್ ಅವರು ಡಿಸೆಂಬರ್ 15-17ರವರೆಗೆ ಬಾಂಗ್ಲಾದೇಶದ ಅಧ್ಯಕ್ಷ ಎಂ.ಅಬ್ದುಲ್ ಹಮೀದ್ ಅವರ ಆಹ್ವಾನದ ಮೇರೆಗೆ ಉಭಯ ನೆರೆಹೊರೆ ರಾಷ್ಟ್ರಗಳ ನಡುವಿನ ಉತ್ತಮ ಸಂಬಂಧಗಳ ಕುರುಹಾಗಿ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮೊಮೆನ್ ಹೇಳಿದರು.

Gayathri SG

Recent Posts

ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 min ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

13 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago